Connect with us

Featured

ಇನ್ನೂ 6 ತಿಂಗಳು ಕೊರೊನಾ ಇರಬಹುದು, ಮಾನಸಿಕವಾಗಿ ಸಜ್ಜಾಗಿ – ಜುಲೈ, ಆಗಸ್ಟ್‌ನಲ್ಲಿ ಕೇಸ್‌​ಗಳು ಉಲ್ಬಣಿಸಬಹುದು : ಆರ್. ಅಶೋಕ್

ರೈಸಿಂಗ್​ ಕನ್ನಡ:

Advertisement

ಬೆಂಗಳೂರು:

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂಧಿಗಳು ಇನ್ನೂ ಆರು ತಿಂಗಳ ಕಾಲ ಮಾನಸಿಕವಾಗಿ ಸಿದ್ಧರಾಗಿರಬೇಕು ಎಂದು ಕೋವಿಡ್ ಉಸ್ತುವಾರಿ ಆರ್. ಅಶೋಕ್ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್​. ಅಶೋಕ್​​, ಜುಲೈ, ಆಗಸ್ಟ್​ನಲ್ಲಿ ಕೊರೊನಾ ಕೇಸ್​ಗಳು ವಿಶ್ವದಾದ್ಯಂತ ಹೆಚ್ಚಾಗಬಹುದು, ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ಸರಕಾರ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ವರೀತಿಯಲ್ಲಿ ಸಿದ್ಧವಾಗಿ ಎಂದು ತಿಳಿಸಿದ್ರು.

ಪಾಸಿಟಿವ್​ ಕೇಸ್​ಗಳು ಹೆಚ್ಚಾಗಬಹುದಾದ ಸನ್ನಿವೇಶ ಇರುವುದರಿಂದ ಯಾರು ಕೂಡ ಭಯಭೀತರಾಗಬಾರದು ಎಂದು ಸರಕಾರ ಹಲವು ರೀತಿಯ ಕ್ರಮ ಕೈಗೊಂಡಿದೆ. ಕೋವಿಡ್ ಲಕ್ಷಣವಿದ್ದರೆ ತಕ್ಷಣವೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಮನವಿ ಅಶೋಕ್​ ಮಾಡಿದ್ದಾರೆ. ಸರ್ಕಾರ ಆಯುರ್ವೇದದಲ್ಲಿ 300 ಬೆಡ್ ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರು ವಿವಿಯಲ್ಲಿ 1000 ಬೆಡ್ ವ್ಯವಸ್ಥೆ ಆಗಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂ ಸೇರಿದಂತೆ ಹಲವೆಡೆ ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. BIEC ಯಲ್ಲಿ 5000 ಬೆಡ್ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಮುಂದಿನ 6 ತಿಂಗಳಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಸರಕಾರ ಮಾಡಲಿದೆ.  ಇಡೀ ವಿಶ್ವದಾದ್ಯಂತ ಪಾಸಿಟಿವ್​ ಕೇಸ್​ ಹೆಚ್ಚಾಗುವುದರಿಂದ ಭಾರತದಲ್ಲೂ ಇದರ ಪರಿಣಾಮ ಆಗಲಿದೆ ಎಂದು ಅಶೋಕ್​ ವಿವರಿಸಿದರು.

ವಿಧಾನ ಸೌಧದಲ್ಲಿನ ನಡೆದ ಸುದ್ದಿಗೋಷ್ಠಿಯಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪಿಸಿ ಮೋಹನ್ ಭಾಗಿಯಾಗಿದ್ದರು. ಕೊರೊನಾ ಚಿಕಿತ್ಸೆಯನ್ನು ಸರಿಯಾಗಿ ನೀಡುತ್ತಿಲ್ಲ ಎಂದು ವಿಕ್ಡೋರಿಯಾ ಆಸ್ಪತ್ರೆ, ಹಜ್ ಭವನ ಸಾಕಷ್ಟು ಸುದ್ದಿಯಲ್ಲಿತ್ತು. ಈಗ ಅದಕ್ಕೂ ಕ್ರಮಕೈಗೊಳ್ಳಲಾಗಿದೆ. ಎಲ್ಲಾ  ಆಸ್ಪತ್ರೆಗಳಲ್ಲಿ ಸಾರ್ವಜನಿಕ‌ ಸಂಪರ್ಕಾಧಿಕಾರಿಗಳನ್ನ ನಿಯೋಜನೆ ಮಾಡಲಾಗಿದೆ. ಕೋವಿಡ್ ಪರೀಕ್ಷೆ ಆದ ತಕ್ಷಣ ಪೇಷಂಟ್ ಗೆ ಫೋನ್ ಮಾಡ್ತಿದ್ರು. ಇನ್ಮುಂದೆ ರೋಗಿಗೆ ಕರೆ ಮಾಡದಂತೆ ಸರ್ಕಾರ ಆದೇಶ ನೀಡಿದೆ. ICMR ಮತ್ತು BBMP ಪೋರ್ಟಲ್ ಗೆ ರೋಗಿಯ ವಿವರ ಅಪ್ಲೋಡ್ ಮಾಡ್ಬೇಕು. ಅಪ್​ ಲೋಡ್​ ಮಾಡದವರ ವಿರುದ್ಧ ಕಾನೂನು  ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ