Featured
ಅಕ್ರಮ ಅದಿರಿ ಸಾಗಾಣೆ, ಹೆಚ್. ಕೆ. ಪಾಟೀಲ್ ವರದಿ ಏನಾಯ್ತು.? | ಹೆಚ್ ಡಿಕೆ ಪ್ರಶ್ನೆ
2013-18ರಲ್ಲಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಅದಿರು ಸಾಗಣೆ ಕುರಿತಂತೆ ಸದನ ಸಮಿತಿ ರಚನೆ ಮಾಡಲಾಗಿತ್ತು. ಸುದೀರ್ಘ ಪರಿಶೀಲನೆ ನಂತರ ಹೆಚ್.ಕೆ.ಪಾಟೀಲ್ ಅವರು ಒಂದು ವರದಿ ನೀಡಿದ್ದರು. ಬಿಜೆಪಿಯನ್ನು 40 ಪರ್ಸೆಂಟ್ ಪಾರ್ಟಿ ಎಂದವರು ಈ ವರದಿಯನ್ನು ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.
ಆ ವರದಿಯಲ್ಲಿ ಬೆಚ್ಚಿ ಬೀಳಿಸುವ ಅಂಶಗಳಿವೆ. 35 ಕೋಟಿ ಟನ್ ಅದಿರು ಅಕ್ರಮವಾಗಿ ರಫ್ತಾಗಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಆ ಅದಿರಿನ ಮೌಲ್ಯ 1.43 ಲಕ್ಷ ಕೋಟಿ ರೂಪಾಯಿ! ಅಂದು ಹೆಚ್.ಕೆ.ಪಾಟೀಲ್ ಅವರು ಕೊಟ್ಟ ಈ ವರದಿಯಲ್ಲಿ ಈ ವಿಚಾರ ಅಡಗಿದೆ. ಈ ವರದಿಯನ್ನು ಅಂದು ಮುಖ್ಯಮಂತ್ರಿಗಳು ತಮ್ಮ ಸೀಟ್ ಕೆಳಗೆ ಇಟ್ಟುಕೊಂಡಿರಲ್ಲ, ಅದನ್ನು ಈಗ ಬಹಿರಂಗ ಮಾಡಿ. ಅದನ್ನು ತಿಂದವರಿಂದ ಹೊರಗೆ ಕಕ್ಕಿಸಿದರೆ ಈ ಗ್ಯಾರಂಟಿಗಳಿಗೆ ಹಣ ಕೊಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?