Connect with us

ಟ್ರೆಂಡಿಂಗ್

ಅವನು ಸ್ನೇಹಿತನ ಹೆಂಡ್ತಿ ಪೋರ್ಟ್ ಮಾಡ್ದ..
ಸಿಟ್ಟಾದ ಗೆಳೆಯ ಮಸಣಕ್ಕೆ ಪೋಸ್ಟ್ ಮಾಡ್ದ..!

ಹುಬ್ಬಳ್ಳಿ : ಅವರಿಬ್ಬರೂ ಸ್ನೇಹಿತರು, ಒಂದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಒಬ್ಬರಿಗೆ ಕಷ್ಟ ಎಂದರೆ ಸಾಕು, ಮತ್ತೊಬ್ಬರು ಸಹಾಯ, ಸಹಕಾರ ನೀಡುತ್ತಿದ್ದರು. ಆದರೆ ಅದೇನು ಆಯ್ತೊ ಗೊತ್ತಿಲ್ಲ..! ಪ್ರಾಣಕ್ಕೆ ಪ್ರಾಣವಾಗಿದ್ದ ಸ್ನೇಹಿತನ ಉಸಿರು ನಿಲ್ಲುವಂತೆ ಮಾಡಿದ್ದಾನೆ ಇನ್ನೊಬ್ಬ ಸ್ನೇಹಿತ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ಈ ಕೆಳಗೆ ಹೇಳತ್ತೇವೆ ನೋಡಿ.

ಹೀಗೆ ಅರೆಬರೆ ಬೆಂದು ಮೃತಪಟ್ಟಿರುವ ಈತ ವಿಜಯ ಸುರೇಶ ಬಸವಾ (25) ಅಂತಾ. ಹೆಗ್ಗೇರಿ ಮಾರುತಿ ನಗರದ ನಿವಾಸಿಯಾಗಿದ್ದ, ಕಳೆದ ಮಂಗಳವಾರ ಈತನನ್ನು ಕಾರವಾರ ರಸ್ತೆಯ ರೈಲ್ವೆ ಇಲಾಖೆಗೆ ಸೇರಿದ್ದ ಮೈದಾನದಲ್ಲಿ ಕಲ್ಲು ಎತ್ತಿ ಹಾಕಿ, ಪೆಟ್ರೋಲ್ ಸುರಿದು ಸುಟ್ಟು ಹಾಕಿ ಅಮಾನವೀಯವಾಗಿ ಕೊಲೆ ಮಾಡಲಾಗಿತ್ತು. ಈ ಕುರಿತು ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ದೂರು ದಾಖಲಾದ 24 ಗಂಟೆಯಲ್ಲಿ ಪ್ರಕರಣವನ್ನು ಪೋಲಿಸರು ಭೇದಿಸುವ ಕೆಲಸ ಮಾಡಿದ್ದಾರೆ.

ಹೌದು, ವಿಜಯ ಬಸವಾ ಕೊಲೆಗೆ ಅನೈತಿಕ ಸಂಬಂಧವೇ ಕಾರಣವೆಂದು ಗೊತ್ತಾಗಿದ್ದು, ಈತನನ್ನು ಜೀವಕ್ಕೆ ಜೀವವಾಗಿದ್ದ ಸ್ನೇಹಿತನೇ ಕೊಲೆ ಗೈದಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ವೊಡಾಫೋನ್ ಐಡಿಯಾ ಕಂಪನಿಯಲ್ಲಿ ಟೀಮ್ ಲೀಡರ್ ಆಗಿದ್ದ ವಿಜಯ ಒಂದು ಕೈ ಸ್ವಾಧೀನತೆ ಇರದೇ ಇದ್ದರು ಉತ್ತಮವಾಗಿ ಕೆಲಸ ಮಾಡುತ್ತಿದ್ದ. ಎಲ್ಲರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದ. ಅದರಂತೆ ಮಂಟೂರ ರಸ್ತೆಯ ಮಿಲ್ಲತ್ ನಗರದ ನಿವಾಸಿ ಸೈಯದ್ ಅಜರ್ (25) ಎಂಬಾತನ ಜೊತೆಗೆ ಆತ್ಮೀಯ ಸ್ನೇಹವನ್ನು ಹೊಂದಿದ್ದ. ಆದರೆ ಇದೇ ಸ್ನೇಹ ವಿಜಯನ ಪ್ರಾಣವನ್ನು ತೆಗೆಯುವಂತೆ ಮಾಡಿದೆ.

ವಿಜಯ ಹಾಗೂ ಸೈಯದ್ ಒಂದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಹಿನ್ನೆಲೆಯಲ್ಲಿ ತುಂಬಾ ಆತ್ಮೀಯರು ಆಗಿದ್ದರು. ಎಷ್ಟರಮಟ್ಟಿಗೆ ಅಂದರೆ ಸ್ನೇಹದಲ್ಲಿ ಯಾರಿಗಾದರೂ ಕಷ್ಟ ಎಂದರೆ ಪರಸ್ಪರ ಸಹಾಯ ಮಾಡುವಷ್ಟು. ಅದರಂತೆ ವಿಜಯ ಸೈಯದ್ ಮನೆಗೆ ಹೋಗುವುದು, ಸೈಯದ್ ಫೋನ್ ಸರಿಯಿಲ್ಲದಾಗ ಸೈಯದ್ ಮನೆಯವರು ವಿಜಯ ಫೋನ್ ಗೆ ಕರೆ ಮಾಡಿ ವಿಚಾರಿಸುವುದು ಮಾಡುತ್ತಿದ್ದರಂತೆ.

ಆದರೆ ಇದೇ ಸಲಹೆ ಮುಂದುವರೆದು ವಿಜಯ ಸೈಯದ್ ಹೆಂಡತಿ ಜತೆಗೆ ಸ್ವಲ್ಪ ಹೆಚ್ಚಿನ ಸಲುಗೆ ಬೆಳೆಸಿಕೊಂಡಿದ್ದ. ಈ ವಿಷಯ ಸೈಯದ್’ಗೆ ಗೊತ್ತಾಗಿ, ಅನುಮಾನದ ಪೆಡಂಭೂತ ತಲೆಗೆ ಹೊಗಿತ್ತು. ಹೇಗಾದರೂ ಮಾಡಿ ವಿಜಯಗೆ ತಕ್ಕಶಾಸ್ತಿ ಮಾಡಬೇಕೆಂದು ನಿರ್ಧಾರ ಮಾಡಿ, ಸಿಟ್ಟಿನ ಕೈಗೆ ಬುದ್ದಿ ಕೊಟ್ಟು ಪಾರ್ಟಿ ನೆಪದಲ್ಲಿ ಕಾರವಾರ ರಸ್ತೆಯ ರೈಲ್ವೆ ಮೈದಾನಕ್ಕೆ ವಿಜಯನನ್ನು ಕರೆಸಿದ್ದಾನೆ. ಆಗ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಸೈಯದ್ ಅಜರ್ ಅಜಯಗೆ ಕಲ್ಲು ಎತ್ತಿ ಹಾಕಿ ಕೊಲೆ ಗೈದು, ಬಳಿಕ ಪೆಟ್ರೋಲ್ ಸುರಿದು ಕೊಲೆಗೈದಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ.

ಸದ್ಯ ವಿಶೇಷ ತಂಡ ರಚಿಸಿ ತನಿಖೆ ಕೈಗೆತ್ತಿಕೊಂಡ ಹಳೇಹುಬ್ಬಳ್ಳಿ ಠಾಣೆಯ ಪೋಲಿಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಪ್ರಾಣಕ್ಕಿಂತ ಹೆಚ್ಚು ಸ್ನೇಹಿತರ ನಡುವೆ ಅನೈತಿಕ ಸಂಬಂಧ ನಡುವೆ ಬಂಧು ಓರ್ವ ಸ್ನೇಹಿತನ ಪ್ರಾಣವನ್ನೇ ಇದೀಗ ಹಾರುವಂತೆ ಮಾಡಿದ್ದು ವಿಪರ್ಯಾಸವೇ ಸರಿ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ