Featured
ಟೆಂಪೋ, ಲಾರಿ ಆಯ್ತು.., ಇದೀಗ ವಿಮಾನ ಏರಿ ಹೊರಟ ಜನ, ಸಾಕಾಯ್ತು ಬೆಂಗಳೂರು ಸಹವಾಸ..!

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :

ಲಾಕ್ಡೌನ್ನಿಂದಾಗಿ ಬೆಂಗಳೂರು ಬಣಗುಡುತ್ತಿದೆ. ಬೆಂಗಳೂರಿನಲ್ಲಿ ನೆಲಸಿದ್ದ ಬೇರೆಯೂರಿನವರೆಲ್ಲಾ ತಮ್ಮ ತಮ್ಮ ಊರಿಗೆ ಗುಳೆ ಹೋಗುತ್ತಿದ್ದಾರೆ. ಬಾನ ದಾರಿಯಲ್ಲೂ ಈ ವಿಚಾರದಲ್ಲಿ ಬಡತನ ಎದುರಾಗಿಲ್ಲ. ನೆರೆ ರಾಜ್ಯಗಳ ಜನರು ವಿಮಾನ ಏರಿ ತಮ್ಮ ತಮ್ಮ ಊರುಗಳಿಗೆ ಸೇರಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಸೋಂಕು ದಿನೇ ದಿನೇ ಕೈಮೀರುತ್ತಲೇ ಇದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ರಾಜ್ಯದಲ್ಲಿ ಒಂದು ವಾರದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಪರಿಣಾಮ ಕಳೆದ ಎರಡು ದಿನಗಳಿಂದ ಬೇರೆ ಬೇರೆ ಜಿಲ್ಲೆಗೆ ಪ್ರಯಾಣಿಸಬೇಕಿದ್ದ ಪ್ರಯಾಣಿಕರು ಗಡಿಬಿಡಿಯಲ್ಲಿ ಬಸ್, ಟೆಂಪೋ, ಲಾರಿ ಹಿಡಿದು ಹೊರಟಿದ್ದು ಸುದ್ದಿ ಸದ್ದು ಮಾಡಿತ್ತು.
ಆದರೆ, ಇದೀಗ ಬೇರೆ ಬೇರೆ ರಾಜ್ಯಗಳಿಗೆ ತೆರಳಬೇಕಿರುವವರು ಗುಳೆ ಹೊರಡಲು ವಿಮಾನ ನಿಲ್ದಾಣಕ್ಕೆ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಬೆಂಗಳೂರನ್ನು ತೊರೆದು ತಮ್ಮ ಊರಿಗೆ ಹೋಗಿ ನೆಲೆಸಲು ವಿಮಾನಗಳ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ದಿನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಲ್ಲದೆ ಬಣಗುಡುತ್ತಿತ್ತು. ಆದ್ರೀಗ ಮತ್ತೆ ಒಂದು ವಾರದ ಲಾಕ್ಡೌನ್ ಘೋಷಣೆ ಮಾಡುತ್ತಿದ್ದಂತೆ, ಖಾಲಿ ಇದ್ದ ವಿಮಾನ ನಿಲ್ದಾಣ ಪ್ರಯಾಣಿಕರಿಂದ ಬಣಗುಡುತ್ತಿದೆ.

ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳನ್ನು ಬುಕ್ ಮಾಡಿದ್ದ ಕಾರಣ ಬುಧವಾರ ಒಂದೇ ದಿನ ಬರೋಬ್ಬರಿ 63 ವಿಮಾನಗಳನ್ನ ಶೆಡ್ಯುಲ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















