ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಯಾವಾಗಲು ಸುದ್ದಿಯಲ್ಲಿ ಇರ್ತಾರೆ. ಹಾಸನ ಡಿಸಿ ಆಗಿದ್ದಾಗ ಹಲವು ಬಾರಿ ವರ್ಗಾವಣೆ ಗೊಂಡು, ಬಳಿಕ ತಡೆಯಾಜ್ಞೆಯಾದ ಉದಾಹರಣೆಗಳು ನಮ್ಮ ಮುಂದಿವೆ. ಆದ್ರೀಗ, ರೋಹಿಣಿ ಸಿಂಧೂರಿ ಕರ್ನಾಟಕ ಕಲ್ಯಾಣ ಮಂಡಳಿ ಕಾರ್ಯಕರ್ಶಿ ಸ್ಥಾನದಿಂದಲೂ ವರ್ಗಾವಣೆ ಆಗಿರೋದು ಸಾಕಷ್ಟು ಚರ್ಚೆ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.
ರೋಹಿಣಿ ಸಿಂಧೂರಿ ವರ್ಗಾವಣೆ ಆಗಿದ್ದು ಯಾಕೆ..? ಅವರು ಸರಿಯಾಗಿ ಕೆಲಸ ಮಾಡ್ತಾ ಇರಲಿಲ್ವಾ..? ಅಥವಾ ಕಾರ್ಮಿಕ ಇಲಾಖೆಯ ಮಾಫಿಯಾದಿಂದ ವರ್ಗಾವಣೆ ಆಯ್ತಾ..? ಹೀಗೆ ಸಾಕಷ್ಟು ಪ್ರಶ್ನೆಗಳ ಜೊತೆ ಅನುಮಾನಕ್ಕೆ ಎಡೆ ಮಾಡಿದೆ. ಈ ಮಧ್ಯೆ, ಸರ್ಕಾರ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಗೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಪತ್ರ ಬರೆದಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆಗೂ ತಮಗೂ ಸಂಬಂಧ ಇಲ್ಲ. ಸಹಾಯವಾಣಿ ನಿರ್ಮಿಸಲು ಕಿಯೋನಿಕ್ಸ್ಗೆ ಟೆಂಡರ್ ಕೊಡಲೂ ಕೂಡ ನಾನು ಹೇಳಿಲ್ಲ. ಕಾನೂನು ಪ್ರಕಾರ ಟೆಂಡರ್ ಕರೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಆದ್ರೆ, ಕೆಲವು ಅಧಿಕಾರಿಗಳು, ಟೆಂಡರ್ ವಿಚಾರದಲ್ಲಿ ರೋಹಿಣಿ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನಲಾಗಿದೆ. ಅಕ್ರಮಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ರೋಹಿಣಿ ವರ್ಗವಾಗಿದೆ ಅನ್ನೋ ಆರೋಪವೂ ಕೇಳಿ ಬರ್ತಿದೆ.
ರೋಹಿಣಿಯವರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕೆಲಸ ಮಾಡುವ ಇಚ್ಛೆ ಇದ್ದರೆ ಅವಕಾಶ ಕೊಡುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟದ್ದು. ವರ್ಗಾವಣೆಗೂ ನನಗೂ ಸಂಬಂಧ ಇಲ್ಲ ಮಣಿವಣ್ಣನ್ ಪತ್ರ ಬರೆದಿದ್ದಾರೆ.
ರೋಹಿಣಿ ಸಿಂಧೂರಿ ಮೇಲಿನ ಆರೋಪವೇನು…?
ರೋಹಿಣಿ ಸಿಂಧೂರಿ ಕರ್ನಾಟಕ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿದ್ದಾಗ ಕಾರ್ಮಿಕರ ಪರ ಕೆಲಸ ಮಾಡಲಿಲ್ಲ ಎಂಬ ಆರೋಪವಿದೆ. 1600ಕ್ಕೂ ಹೆಚ್ಚು ಕಾರ್ಮಿಕರು ರಾಜ್ಯದಲ್ಲಿ ಆಕಸ್ಮಿಕ ಅಪಘಾತದಿಂದ ಮೃತಪಟ್ಟರೂ ಪರಿಹಾರ ನೀಡಿಲ್ಲ. ರೋಹಿಣಿ ಸಿಂಧೂರಿಯವರೇ 600 ಕಡತಗಳನ್ನ ನೋಡಿದ್ದರೂ ಪರಿಹಾರ ನೀಡಿಲ್ಲ ಎಂದು ದೂರು ನೀಡಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪಗೂ ಕಾರ್ಮಿಕ ಸಂಘಟನೆಗಳು ಪತ್ರ ಬರೆದಿದ್ದವು. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸಿಲ್ಕ್ ಬೋರ್ಡ್ಗೆ ವರ್ಗಾವಣೆ ಮಾಡಲಾಗಿದೆ.
ಟೆಂಡರ್ ಗೋಲ್ ಮಾಲ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲು ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸಲಾಗಿದೆ ಎನ್ನಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?