Connect with us

ಆರೋಗ್ಯ

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು.

ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ.‌ ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.‌ ಮಂಗನ ಕಾಯಿಲೆಗೆ ಎಬಿಎಆರ್ ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್ ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇವೆ. 2 ಸಾವಾಗೀಡಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ಗುಂಡೂರಾವ್ ತಿಳಿಸಿದರು.

ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿ ಕಾರ್ಯಕ್ರಮ ಕೈಗೊಳ್ಳುಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ DEPA ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 DEPA ಬಾಟಲ್ ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, RRT ತಂಡ ನಿಯಮಿತವಾಗಿ ಭೇಟಿ ನೀಡುತ್ತಿದ್ದು ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಪ್ರತಿ ದಿನ ವಿ.ಸಿ. ಮುಖೇನ ಸದರಿ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ನಡೆಸಲಾಗುತ್ತಿದೆ. VDL ಶಿವಮೊಗ್ಗ ಮತ್ತು MIV ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ. KFD ಪಾಸಿಟಿವ್ ಪ್ರಕರಣಗಳನ್ನು ಮನೆಯಿಂದ ಆಸ್ಪತ್ರೆಗೆ ಸಾಗಿಸಲು ಮತ್ತು ಅಗತ್ಯವಿದ್ದರೆ, ಉನ್ನತ ರೆಫರಲ್ ಸೆಂಟರ್‌ ನಾಗಿಸಲು ಉಚಿತ ಆಂಬ್ಯುಲೆನ್ಸ್ ಸೌಲಭ್ಯ ಒದಗಿಸಿದೆ. ರೋಗ ಪ್ರಸರಣಾ ಋತುವಿನಲ್ಲಿ ತಾಲ್ಲೂಕು ಆಸ್ಪತ್ರೆಗಳಾದ ಜಿಸಿಎಚ್ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ KFD ಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ICU ನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ-ಗತಿಯನ್ನು ಪ್ರತಿದಿನ ಪರೀಶೀಲಿಸಲು ಟೆಲಿ-ICU ಸೇವೆಯನ್ನು KFD ಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ