Featured
ಕೇರಳ ಮಾದರಿ ಕರ್ನಾಟಕದಲ್ಲೂ ವಾಟರ್ ಬೆಲ್.!? : ಇಷ್ಟಕ್ಕೂ ಏನಿದು #WaterBell..?

ಬೆಂಗಳೂರು : ಕೇರಳ ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ ಶಾಲಾ ಮಕ್ಕಳು ನೀರು ಕುಡಿಯಲು ವಿಶೇಷ ಬೆಲ್ ಮಾಡಲಾಗುತ್ತೆ. ಇದನ್ನೇ ವಾಟರ್ ಬೆಲ್ ಅಂತ ಕರೆಯಲಾಗ್ತಿದೆ. ಮಕ್ಕಳಲ್ಲಿ ನಿರ್ಜಲೀಕರಣ, ಮೂತ್ರ ಸಂಬಂಧಿ ರೋಗಗಳು ಹೆಚ್ಚಾಗ್ತಿವೆ. ಇದಕ್ಕೆ ಕಾರಣ, ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯದೇ ಇರೋದು. ಹೀಗಾಗಿ, ಮಕ್ಕಳು ಆರೋಗ್ಯವಂತರಾಗಿ ಇರಬೇಕು ಅನ್ನೋ ಕಾರಣಕ್ಕಾಗಿ ವಾಟರ್ ಬೆಲ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಈಗ ಇದೇ ಮಾದರಿಯಲ್ಲಿ ಕರ್ನಾಟಕ ಸಾಗಿದೆ.
ಕರ್ನಾಟಕ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗಮನ ಸೆಳೆಯಲು, ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳಿಗೆ ವಾಟರ್ ಬೆಲ್ ಕಡ್ಡಾಯ ಮಾಡುವಂತೆ ಅಭಿಯಾನ ಶುರುವಾಗಿದೆ. ಕೇರಳ ಮಾದರಿಯಂತೆ ನಮ್ಮಲ್ಲೂ ಶಾಲೆಗಳಲ್ಲಿ ವಾಟರ್ ಬೆಲ್ ಕಡ್ಡಾಯ ಮಾಡಿದರೆ, ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ನೀರು ಕುಡಿಯುತ್ತಾರೆ. ಇದರಿಂದ ಮುಂದೆ ಎದುರಾಗಬಹುದಾದ ಆರೋಗ್ಯ ಸಮಸ್ಯೆಗಳಿಂದ ಮಕ್ಕಳು ತಪ್ಪಿಸಿಕೊಳ್ಳಬಹುದು.
ಸಾಮಾಜಿಕ ಜಾಲತಾಣಗಳ ಅಭಿಯಾನದಿಂದ ಎಚ್ಚೆತ್ತಿರೋ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇದು ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅತ್ಯಗತ್ಯ ಹೆಜ್ಜೆ. ನಮ್ಮ ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಟಾನ ಗೊಳಿಸುವ ಕುರಿತು ಯೋಚಿಸಿ ಮಾಡಲಾಗಿದೆ. ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೆ ಆದ್ರೆ, ಮುಂದಿನ ದಿನಗಳಲ್ಲಿ ಕರ್ನಾಟಕದ ಶಾಲೆಗಳಲ್ಲೂ ವಾಟರ್ ಬೆಲ್ ಜಾರಿಯಾಗೋದು ಪಕ್ಕಾ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?