Connect with us

Featured

ಕೊರೊನಾಗೆ ಕಡಿವಾಣ ಹಾಕಲು ಪೈಪೋಟಿ ..? ರೇಸ್​​ನಲ್ಲಿದೆ ಭಾರತದ 7 ಮೆಡಿಸಿನ್ ಕಂಪನಿಗಳು..!

ರೈಸಿಂಗ್​ ಕನ್ನಡ, ನ್ಯೂಸ್​​​ ಡೆಸ್ಕ್​:

Advertisement

ವಿಶ್ವವೇ ಕೊರೊನಾದಿಂದ ಕಂಗಾಲಾಗಿದೆ. ಚೀನಾದ ವುಹಾನ್​ನಲ್ಲಿ ಹುಟ್ಟಿದ ಮಾರಣಂತಿಕ ವೈರಸ್​​ ಈಗ ಜಗತ್ತಿನಲ್ಲಿರುವ ಪ್ರತೀ ಮನೆ ಮನೆಗೂ ತಲುಪಿರುವ ಭೀತಿ ಇದೆ. ಕಳೆದ ಡಿಸೆಂಬರ್​ನಲ್ಲಿ ಮೊದಲ ಬಾರಿಗೆ ಚೀನಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್​19 ವೈರಸ್​​, ಮೂರೇ ಮೂರು ತಿಂಗಳುಗಳಲ್ಲಿ ಇಡೀ ಜಗತ್ತನ್ನು ಆವರಿಸಿದೆ. ಆದರೆ ಇಲ್ಲಿ ತನಕ ಕೊರೊನಾಗೆ ಮೆಡಿಸಿನ್​ ಯಾವುದು ಅನ್ನೋದು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ನಡುವೆ ಕೊರೊನಾ ವ್ಯಾಕ್ಸಿನ್​​​​​ ಸಂಶೋಧನೆ ಮಾಡಲು ವಿಶ್ವದ ಎಲ್ಲಾ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ.  ಭಾರತವೂ ಕೊರೊನಾಗೆ ಲಸಿಕೆ ಕಂಡುಹಿಡಿಯುವ ರೇಸ್​ನಲ್ಲಿದೆ.

ಕೊರೊನಾಗೆ  ಲಸಿಕೆ ಕಂಡುಹಿಡಿಯಲು ಭಾರತದ ಭಾರತದ 7 ಫಾರ್ಮಾ ಕಂಪನಿಗಳು ಪೈಪೋಟಿಯಲ್ಲಿವೆ. ಜಾಗತಿಕ ಮಟ್ಟದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಭಾರತ್ ಬಯೋಟೆಕ್, ಸೆರಮ್ ಇನ್ಸ್ಟಿಟ್ಯೂಟ್, ಝೈಡಸ್ ಕ್ಯಾಡಿಲಾ, ಪ್ಯಾನೇಸಿಯಾ ಬಯೋಟೆಕ್, ಇಂಡಿಯನ್ ಇಮ್ಯುನೊಲಾಜಿಕಲ್ಸ್, ಮೈನ್ವಾಕ್ಸ್ ಹಾಗೂ ಬಯೋಲಾಜಿಕಲ್ ಇ ಅನ್ನುವ 7  ಭಾರತೀಯ ಫಾರ್ಮಾ ಕಂಪನಿಗಳು ಕೊರೊನಾ ಮೆಡಿಸಿನ್​​​​ ಕಂಡುಹಿಡಿಯುವಲ್ಲಿ ಬ್ಯೂಸಿಯಾಗಿವೆ.

Advertisement

WHO ಕೂಡ ಎಲ್ಲಾ ದೇಶಗಳ  ಬಯೋ ಕಂಪನಿಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಕೊರೊನಾ ಲಸಿಕೆಯ ಟ್ರಯಲ್​ಗಳ ಮೇಲೆ ಕಣ್ಣಿಟ್ಟಿದೆ. ಸಾಮಾನ್ಯವಾಗಿ ಯಾವುದೇ ಲಸಿಕೆಯ ಪರೀಕ್ಷೆಗೆ ಒಂದೂವರೆ ವರ್ಷ ಸಮಯಾವಕಾಶ ಬೇಕು. ಅಷ್ಟೇ ಅಲ್ಲ ಅದನ್ನು ತಯಾರಿಸಲು ಮತ್ತು ಹಂಚಲು ಸಾಕಷ್ಟು ಸಮಯ ಬೇಕಾಗುತ್ತದೆ.  ಆದರೆ ಈಗ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಫಾರ್ಮಾ ಸಂಸ್ಥೆಗಳು ವೇಗವಾಗಿ ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ನಿರತವಾಗಿವೆ.

ಕೊವ್ಯಾಕ್ಸಿನ್ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆ. ಇದರ ಮೊದಲ ಹಾಗೂ 2 ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಅನುಮತಿ ನೀಡಲಾಗಿದೆ.   ಮನುಷ್ಯರ ಮೇಲಿನ ಕ್ಲಿನಿಕಲ್ ಟ್ರಯಲ್ಸ್  ಕೂಡ ನಡೆಯುತ್ತಿದೆ.

ಸೆರಮ್ ಇನ್ಶ್ಟಿಟ್ಯೂಟ್ ಆಫ್ ಇಂಡಿಯಾ ಲಸಿಕೆ ತಯಾರಿಕೆ ಬಗ್ಗೆ ಮಾಹಿತಿ ನೀಡಿದ್ದು ಕೋವಿಡ್-19 ಗೆ ವರ್ಷಾಂತ್ಯದ ವೇಳೆಗೆ ಲಸಿಕೆ ಕಂಡುಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದೆ.

Advertisement

ಅಸ್ಟ್ರಾಜೆನೆಕಾ ಆಕ್ಸ್‌ಫರ್ಡ್ ಲಸಿಕೆಯ ಮೇಲೆ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುತ್ತಿದ್ದೇವೆ. ಇದರ ಜೊತೆಗೆ ಆಗಸ್ಟ್ 2020 ರ ವೇಳೆಗೆ ಭಾರತದಲ್ಲಿ ಮನುಷ್ಯರ ಮೇಲೂ ಈ ಲಸಿಕೆಯ ಪ್ರಯೋಗ ನಡೆಯಲಿದೆ ಎಂದು ಸೆರಮ್ ಇನ್ಸ್ಟಿಟ್ಯೂಟ್ ನ ಸಿಇಒ ಅದಾರ್ ಪೂನಾವಾಲ ತಿಳಿಸಿದ್ದಾರೆ.

Advertisement

ಅಮೆರಿಕ ಮೂಲದ ಬಯೋಟೆಕ್ ಸಂಸ್ಥೆ ಕೊಡಜೆನಿಕ್ಸ್ ಜೊತೆಗೂಡಿ ಲೈವ್ ಅಟೆನ್ಯುವೇಟೆಡ್ ಲಸಿಕೆಯನ್ನೂ ಈ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ಈ ಸಂಸ್ಥೆಗಳು ತಯಾರಿಸುತ್ತಿರುವ ಲಸಿಕೆ ಭಾರತದ ಜೊತೆಗೆ  ಮಧ್ಯಮ ಹಾಗೂ ಕಡಿಮೆ ಆದಾಯ ಹೊಂದಿರುವ ದೇಶಗಳಿಗೆ ಸಹಕಾರಿ ಎಂದು ಪೂನಾವಾಲ ತಿಳಿಸಿದ್ದಾರೆ. ಇನ್ನು ಝೈಡಸ್ ಕ್ಯಾಡಿಲಾ ಸಂಸ್ಥೆ ಕ್ಯಾಂಡಿಡೇಟ್ ಝೈಕೋವಿ-ಡಿ ಲಸಿಕೆಯ ಕ್ಲಿನಿಕಲ್ ಟ್ರಯಲ್ ನ್ನು 7 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದೆ. ಒಟ್ಟಿನಲ್ಲಿ ಕೊರೊನಾ ಕಾಟದಿಂದ ಮುಕ್ತಿಪಡೆಯಲು ಎಲ್ಲೆಡೆ ಸಂಶೋಧನೆಗಳು ನಡೆಯುತ್ತಿವೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ