ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದರಂತೆ ಕೈ ನಾಯಕ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್ ಸೇರಿದಂತೆ 23 ಕೈ ನಾಯಕರು ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದರು. ಇದು ಕೈ ಪಾಳೆಯಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. ಕೈ ಪಕ್ಷದಲ್ಲಿ ಹಿರಿಯ ಮತ್ತು ಕಿರಿಯ ನಾಯಕರ ನಡುವಿನ ಮುಸಕಿನ ಗುದ್ದಾಟ ಸ್ಪೋಟಗೊಂಡು ಬೀದಿಗೆ ಬಂದಿದೆ.
ಕಾರ್ಯಾಕಾರಿ ಸಮಿತಿಯಲ್ಲಿ ನಡೆದ ಮಾತುಕತೆಯನ್ನ ಕೈ ನಾಯಕರು ಬಹಿರಂಗ ಪಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಗುಲಾಂ ನಬಿ ಅಜಾದ್ ಸೇರಿದಂತೆ ಹಿರಿಯ ಕೈ ನಾಯಕರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಜೊತೆಗಿನ ಆರೋಪ ಸಾಬೀತಾದರೆ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಗುಲಾಂ ನಬಿ ಅಜಾದ್ ತಿರುಗೇಟು ಕೊಟ್ಟಿದ್ದಾರೆ.
30 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇವೆ. ಬಿಜೆಪಿ ಪರವಾಗಿ ಮಾತನಾಡಿಲ್ಲ. ಮಣಿಪುರ, ರಾಜಸ್ತಾನದಲ್ಲಿ ಸರ್ಕಾರವನ್ನ ಬಚಾವ್ ಮಾಡಿದ್ದೆವೆ ಎಂದು ಕಪಿಲ್ ಸಿಬಲ್ ಟ್ವೀಟರ್ನಲ್ಲಿ ಬರೆದಿದ್ದಾರೆ.
ಇನ್ನು ರಾಜಕೀಯದಿಂದ ದೂರ ಉಳಿದಿದ್ದ ನಟಿ ರಮ್ಯ ರಾಹುಲ್ ಗಾಂಧಿ ಬೆನ್ನಿಗೆ ನಿಂತಿದ್ದಾರೆ. ಟ್ವೀಟರ್ನಲ್ಲಿ ಬರೀ ಪತ್ರವನ್ನ ಮಾತ್ರವಲ್ಲ ಸಿಡಬ್ಲ್ಯುಸಿ ಸಭೆಯಲ್ಲಿ ನಡೆದ ಮಾತುಕತೆಯನ್ನ ಲೀಕ್ ಮಾಡಿದ್ದಾರೆ ಎಂದು ಬರೆದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?