Featured
ಕೊನೆಗೂ ಗೆದ್ದು ಸಮಾಧಾನ ಪಟ್ಟ ಟೀಮ್ ಇಂಡಿಯಾ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (92) ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದೆ.
ಕೆನಬೆರಾ ಅಂಗಳದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭಿಕರಾಗಿ ಬಂದ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ಧವನ್ 16 ರನ್ ಗಳಿಸಿ ಅಬೋಟ್ಗೆ ವಿಕೆಟ್ ಒಪ್ಪಿಸಿದ್ರೆ 33 ರನ್ಗಳಿಸಿದ್ದ ಶುಭಮನ್ ಗಿಲ್ ಅಗಾರ್ಗೆ ಬಲಿಯಾದ್ರು. ನಂತರ ಬಂದ ವಿರಾಟ್ ಕೊಹ್ಲಿ ತಾಳ್ಮೆಯ ಬ್ಯಾಟಿಂಗ್ ಮಾಡಿದ್ರೆ ಇವರಿಗೆ ಶ್ರೇಯಸ್ ಅಯ್ಯರ್ ಮತ್ತು ಕನ್ನಡಿಗ ಕೆ.ಎಲ್.ರಾಹುಲ್ ಒಳ್ಳೆಯ ಸಾಥ್ ಕೊಡಲಿಲ್ಲ. ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿ ಹೆಜ್ಲ್ವುಡ್ಗೆ ಬಲಿಯಾದ್ರು.
ಕೆಳಕ್ರಮಾಂಕದಲ್ಲಿ ರವೀಂದ್ರ ಜಡೇಜಾ (66) ಮತ್ತು ಹಾರ್ದಿಕ್ ಪಾಂಡ್ಯ (92) ತಂಡಕ್ಕೆ ಆಸರೆಯಾಗಿ ತಂಡದ ಮೊತ್ತ 300ರ ಗಡಿ ದಾಟಿಸುವಲ್ಲಿ ನೆರವಾದರು. ಅಂತಿಮವಾಗಿ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 302 ರನ್ ಗಳಿಸಿತು.
303 ರನ್ಗಳ ಸವಾಲಿನ ಮೊತ್ತ ಬೆನ್ನತ್ತಿದ ಅಸ್ಟ್ರೇಲಿಯಾ ತಂಡಕ್ಕೆ ಡೆಬ್ಯುಟೆಂಟ್ ವೇಗಿ ನಟರಾಜನ್ ಬೌಲ್ಡ್ ಮಾಡಿ ಆಘಾತ ಕೊಟ್ರು. ನಂತರ ಬಂದ ಸ್ಟೀವ್ ಸ್ಮಿತ್ (7) ಮೊಸಿಸ್ ಹೆನ್ರಿಕ್ಸ್ (22), ಆ್ಯಲೆಕ್ಸ್ ಕ್ಯಾರಿ 38 ರನಗಳಿಸಿದ್ರು. ಇತ್ತ ಅ್ಯರಾನ್ ಫಿಂಚ್ 75 ರನ ಗಳಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದ್ರು. ಕೊನೆಯಲ್ಲಿ ಬಾಲಂಗೋಚಿಗಳ ಜೊತೆಗೂಡಿ ಗ್ಲೇನ್ ಮ್ಯಾಕ್ಸ್ವೆಲ್(55) ತಂಡವನ್ನ ಗೆಲುವಿನತ್ತ ಕೊಂಡೊಯ್ಯುತ್ತಿದ್ದರು. ಆದರೆ 45ನೇ ಓವರ್ನಲ್ಲಿ ದಾಳಿಗಿಳಿದ ಜಸ್ಪ್ರೀತ್ ಬುಮ್ರಾ ಗ್ಲೇನ್ ಮ್ಯಾಕ್ಸ್ವೆಲ್ ಅವರನ್ನ ಬೌಲ್ಡ್ ಮಾಡಿ ಪಂದ್ಯ್ ಕ್ಕೆ ದೊಡ್ಡ ತಿರುವು ಕೊಟ್ರು.
ಕೊನೆಯಲ್ಲಿ ಆಸ್ಟ್ರೇಲಿಯಾ ತಂಡ 49.3 ಓವರ್ಗಳಲ್ಲಿ 289 ರನ್ಗಳಿಸಿ ಸರ್ವಪತನ ಕಂಡಿತು. ಭಾರತ 13 ರನ್ಗಳ ರೋಚಕ ಗೆಲುವಿನೊಂದಿಗೆ ಸಮಾಧಾನಪಟ್ಟುಕೊಂಡಿತ್ತು. ಆಸ್ಟ್ರೇಲಿಯಾ 2-1 ಅಂತರದಿಂದ ಸರಣಿ ಗೆದ್ದುಕೊಂಡಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?