ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಕೊರೊನಾ ವಿರುದ್ಧದ ಹೋರಾಟಕ್ಕೆ ಭಾರತದಲ್ಲೇ ಮದ್ದು ತಯಾರಾಗಿದೆ. ‘ಕೊವ್ಯಾಕ್ಸಿನ್‘ ಹೆಸರಿನ ಮದ್ದು ಇದಾಗಿದ್ದು, ಇದರ ಪ್ರಯೋಗಕ್ಕೆ ಡಿಸಿಜಿಐ(ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ) ಅನುಮತಿಯನ್ನೂ ನೀಡಿದೆ. ಹೈದ್ರಾಬಾದ್ ಮೂಲದ, ವ್ಯಾಕ್ಸಿನ್ ತಯಾರಿಕ ಕಂಪೆನಿ ಭಾರತ್ ಬಯೋಟೆಕ್ನ ಅನ್ವೇಷಣೆ ಇದಾಗಿದೆ.
ಜುಲೈನಲ್ಲಿ ಭಾರತದಾದ್ಯಂತ ಈ ಲಸಿಕೆಯ ಪ್ರಯೋಗ ನಡೆಯಲಿದೆ. ಕೋವಿಡ್-19 ವಿರುದ್ಧದ ಮೊದಲ ಸ್ವದೇಶಿ ಲಸಿಕೆ ಇದಾಗಿದ್ದು, ಹೆಮ್ಮೆಯಿಂದ ಘೋಷಿಸುತ್ತಿದ್ದೇವೆ ಎಂದು ಐಸಿಎಂಆರ್ ಮತ್ತು ಎನ್ಐವಿ ಸಹಭಾಗಿತ್ವದಲ್ಲಿ ಈ ಔಷಧವನ್ನು ಕಂಡುಹಿಡಿಯಲಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆಯ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣಾ ಯಲ್ಲ ಹೇಳಿದ್ದಾರೆ.
ಪ್ರಗತಿಯಲ್ಲಿರುವ ಸಂಶೋಧನೆ ಮತ್ತು ಪರಿಣಿತರ ಮುನ್ಸೂಚನೆಯಂತೆ ಹೆಚ್ 1 ಎನ್ 1 ಸಾಂಕ್ರಾಮಿಕ ರೋಗಕ್ಕೂ ಯಶಸ್ವಿಯಾಗಿ ಲಸಿಕೆಯೊಂದನ್ನ ಕಂಡುಹಿಡಿಯುವಲ್ಲಿ ಯಶಸ್ವಿಯಾಗುವುದಾಗಿ ಭಾರತ ಬಯೋಟೆಕ್ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಸುಚಿತ್ರಾ ಯಲ್ಲಾ ತಿಳಿಸಿದ್ದಾರೆ. ಈ ಸಂಸ್ಥೆ ಈಗಾಗಲೇ ಪೋಲಿಯೋ, ರೇಬಿಸ್, ರಾಟಾ ವೈರಸ್, ಚಿಕೂನ್ ಗುನ್ಯಾ, ಜಪಾನೀಸ್ ಎನ್ಸೆಫಾಲಿಟಿಸ್ ಮತ್ತು ಜಿಂಕಾ ಕಾಯಿಲೆಗಳಿಗೂ ವ್ಯಾಕ್ಸಿನ್ ಕಂಡುಹಿಡಿದಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?