Featured
ಶ್ರೀಕೃಷ್ಣ ಜನ್ಮಾಷ್ಟಮಿಗೆ ಇಸ್ಕಾನ್ನಿಂದ ಸ್ವಾಗತಂ ಕೃಷ್ಣ- ಭಕ್ತರಿಗೆ ಆನ್ಲೈನ್ನಲ್ಲೇ ಪೂಜೆಯ ದರ್ಶನ..!

ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ಹಬ್ಬಗಳಿಗು ಕಾಟ ಕೊಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಬಾರಿ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಣೆ ಮಾಡದೇ ಇರಲು ಸರ್ಕಾರ ಸೂಚಿಸಿದೆ. ಹೀಗಾಗಿ ಕೃಷ್ಣಜನ್ಮಾಷ್ಟಮಿ ದಿನದಂದು ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಆಗಸ್ಟ್ 11ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ.
ಆದರೆ ಇಸ್ಕಾನ್ ಕೃಷ್ಣಜನ್ಮಾಷ್ಟಮಿ ಪೂಜೆಯನ್ನು ಆನ್ಲೈನ್ನಲ್ಲಿ ವೀಕ್ಷಣೆ ಅವಕಾಶ ಮಾಡಿಕೊಡುತ್ತಿದೆ. ಆಗಸ್ಟ್11-12 ರಂದು ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ದೇವಸ್ಥಾನದಲ್ಲಿ ಭಕ್ತರಿಗೆ ಅವಕಾಶ ನೀಡಿದರೆ ಕೊರೊನ ಹೆಚ್ಚಳ ಭೀತಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಾಗತಂ ಕೃಷ್ಣ ಲೈವ್ ಎಂಬ ಶೀರ್ಷಿಕೆ ಯಡಿ ಇಸ್ಕಾನ್ ಸಾಮಾಜಿಕ ಜಾಲತಾಣ ಮೂಲಕ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿದೆ. ಇಸ್ಕಾನ್ ನಲ್ಲಿ ಆಗಸ್ಟ್11-12 ರಂದು ವಿವಿಧ ಕಾರ್ಯಕ್ರಮ ನಡೆಯಲಿವೆ.
ಮನೆಯಲ್ಲಿ ಕುಳಿತುಕೊಂಡು ಭಕ್ತರು ದೀಪೋತ್ಸವ, ಅಭಿಷೇಕ, ಪಂಚಗವ್ಯ ವೀಕ್ಷಣೆ ಗೆ ಅವಕಾಶ ಮಾಡಬಹುದು. ಪ್ರತಿ ವರ್ಷ ಕೃಷ್ಣಜನ್ಮಾಷ್ಟಮಿ ದಿನದಂದು ಲಕ್ಷಾಂತರ ಜನ ಇಸ್ಕಾನ್ ಗೆ ಭೇಟಿ ನೀಡುತ್ತಿದ್ರು. ಆದರೆ ಈ ಭಾರಿ ಇಸ್ಕಾನ್ ನಲ್ಲಿ ಭಕ್ತರಿಗೆ ಬ್ರೇಕ್ ಹಾಕಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?