Connect with us

Featured

‘ಕಲಾವಿದ’ ತೆರೆಗೆ ಬರಲು‌ ಸಿದ್ದ.

ರೈಸಿಂಗ್​ ಕನ್ನಡ ಸಿನಿಮಾ ಡೆಸ್ಕ್​​:

ಪದ್ಮರಾಜ್ ಫಿಲ್ಮ್ಸ್​ ನಿರ್ಮಿಸಿರುವ ‘ಕಲಾವಿದ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶಿವಾನಂದ್ ಹೆಚ್.ಡಿ ನಿರ್ದೇಶಿಸಿದ್ದಾರೆ.‌ ಹನ್ನೆರಡು ವರ್ಷಗಳಿಂದ ಹಲವು ಕನ್ನಡ ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ‘ಕಲಾವಿದ’ ಶಿವಾನಂದ್ ನಿರ್ದೇಶನದ ಮೊದಲ ಚಿತ್ರ.


‘ಕಲಾವಿದ’ ಚಿತ್ರದ ನಾಯಕನಾಗಿ ಪ್ರದೀಪ್ ಕುಮಾರ್ ಅಭಿನಯಿಸಿದ್ದಾರೆ. ಈ ಚಿತ್ರದ ನಿರ್ಮಾಪಕರು ಆಗಿರುವ ಪ್ರದೀಪ್ ಕುಮಾರ್ ಮೂಲತಃ ಹಾಸನ‌ ಜಿಲ್ಲೆಯವರು. ಬಾಲ್ಯದಿಂದಲೇ ಸಿನಿಮಾ ದಲ್ಲಿ ನಟಿಸಬೇಕೆಂಬ ಆಸೆ ಹೊತ್ತು, ಬೆಂಗಳೂರಿಗೆ ಬಂದ ಇವರು, ಖಾಸಗಿ‌ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸಿದ್ದಾರೆ.
ನಂತರ ಕೆಲವು ನಾಟಕಗಳಲ್ಲಿ‌ ಅಭಿನಯಿಸಿ, ಒಂದು ವರ್ಷ ಕಾಲ ಕೆಲವು ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಂತರ ಕೋರಮಂಗಲದಲ್ಲಿ ರಂಗ್ ದೇ ಬಸಂತಿ‌ ಎಂಬ ಹೋಟೆಲ್ ಆರಂಭಿಸಿದ್ದಾರೆ. ಅದರಿಂದ ಬಂದ ಹಣದಿಂದ ಈ ಸಿನಿಮಾ ನಿರ್ಮಿಸಿರುವುದಾಗಿ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

Advertisement


ಧಾರಾವಾಹಿ‌ ಮೂಲಕ ‌ನಟನೆ ಆರಂಭಿಸಿ, ರಣರಣಕ ಸಿನಿಮಾದಲ್ಲಿ ನಟಿಸಿದ್ದ ಸಂಭ್ರಮ ಈ ಚಿತ್ರದ ನಾಯಕಿ.
ಮಂಜುನಾಥ್ ಹೆಗ್ಡೆ, ಅರುಣಾ ಬಾಲರಾಜ್, ಮೂ. ಗು ಸುರೇಶ್, ವರ್ಷ ಮಲ್ಲೇಶ್, ಗೀತ( ಗುಂಡಮ್ಮ) ಶ್ರೀಧರ್, ಜಗದೀಶ್, ಲೋಕೇಶ್ ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿದಾನಂದ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ – ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ವೆಂಕಿ ಯು ಡಿ ವಿ ಸಂಕಲನ ಹಾಗೂ ಆರ್ಯ ರೋಷನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ರೋರಿಂಗ್ ಸ್ಟಾರ್ ಶ್ರೀಮುರುಳಿ ಇತ್ತೀಚೆಗೆ ‘ಕಲಾವಿದ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಚಿತ್ರ ಉತ್ತಮವಾಗಿ ಮೂಡಬಂದಿರುವುದಾಗಿ ತಿಳಿಸಿರುವ ಪ್ರದೀಪ್ ಕುಮಾರ್ ಚಿತ್ರ ಬಿಡುಗಡೆಗೆ ಸರ್ಕಾರ ಅನುಮತಿ ನೀಡಿದ ಕೂಡಲೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ‘ಕಲಾವಿದ’ನ ಆಗಮನವಾಗಲಿದೆ ಎಂದಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ