Connect with us

ಕ್ರೀಡೆ

ಟಿ-20 ವಿಶ್ವಕಪ್​ನಲ್ಲಿ ಕನ್ನಡದ ‘ನಂದಿನಿ’ ಕಂಪು!

ನಂದಿನಿ ಹಾಲು ಉತ್ಪನ್ನಗಳಿಂದ ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಹೆಸರುವಾಸಿಯಾದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತೊಂದು ಹೆಜ್ಜೆ ಮುಂದೆಯಿಟ್ಟಿದ್ದು, ವಿಶ್ವದೆಲ್ಲೆಡೆ ‘ನಂದಿನಿ’ ಕಂಪು ಪಸರಿಸಲು ಹೊರಟಿದೆ.

ಹೌದು… ಕರ್ನಾಟಕ ಹಾಲು ಒಕ್ಕೂಟ ಹೊಸ ಸಾಹಸಕ್ಕೆ ಕೈ ಹಾಕಿದೆ. ಕರ್ನಾಟಕ ಹಾಲು ಒಕ್ಕೂಟ, ಜೂನ್​ನಲ್ಲಿ ನಡೆಯಲಿರುವ T20 ಕ್ರಿಕೆಟ್ ವಿಶ್ವಕಪ್​ನಲ್ಲಿ ಪ್ರಾಯೋಜಕತ್ವ ಪಡೆಯಲು ಮುಂದಾಗಿದೆ. ಒಂದು ಅಥವಾ ಹೆಚ್ಚಿನ ತಂಡಗಳಿಗೆ ಪ್ರಾಯೋಜಕತ್ವದ ಅವಕಾಶ ಪಡೆಯಲು ಸ್ಪರ್ಧಿಸುತ್ತಿದೆ.

ವರದಿಗಳ ಪ್ರಕಾರ, ಕೆಎಂಎಫ್ ಈಗಾಗಲೇ ಇದಕ್ಕೆ ಟೆಂಡರ್ ಅನ್ನು ಬಿಡುಗಡೆ ಮಾಡಿದೆ. ಐಸಿಸಿ ಟಿ20 ವಿಶ್ವಕಪ್ 2024 ರಲ್ಲಿ ಭಾಗವಹಿಸುವ ಒಂದು ಅಥವಾ ಹಲವಾರು ತಂಡಗಳ ಲೀಡ್ ಆರ್ಮ್ ಜೆರ್ಸಿಯ ತೋಳಿನ ಮೇಲೆ ನಂದಿನಿ ಲೋಗೋವನ್ನು ಪ್ರಚಾರ ಮಾಡಲು ಕೆಎಂಎಫ್ ಸ್ಥಂಸ್ಥೆ ಟೆಂಡರ್ ಕರೆದಿದೆ. ಆಸಕ್ತಿ ಹೊಂದಿರುವ ಕಂಪನಿಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.

ನಂದಿನಿ ಬ್ರ್ಯಾಂಡ್ ಈ ಹಿಂದೆ ಇತರ ಕ್ರೀಡೆಗಳಿಗೆ ಪ್ರಾಯೋಜಕತ್ವ ನೀಡಿದೆ. ಉದಾಹರಣೆಗೆ ಪ್ರೊ ಕಬಡ್ಡಿ ಲೀಗ್ನಲ್ಲಿ ಬೆಂಗಳೂರು ಬುಲ್ಸ್ನ ಸಹಾಯಕ ಪ್ರಾಯೋಜಕರಾಗಿದ್ದಾರೆ. ಆದರೆ ಕ್ರಿಕೆಟ್ ಆಟದೊಂದಿಗೆ ಇದೆ ಮೊದಲ ಬಾರಿಗೆ ಪ್ರಾಯೋಜಕತ್ವ ಪಡೆಯಲಿದೆ. ಕ್ರಿಕೆಟ್ ಪಿಚ್ನಲ್ಲಿ ‘ನಂದಿನಿ’ ಪಾದಾರ್ಪಣೆ ಮಾಡುವುದರೊಂದಿಗೆ ‘ನಂದಿನಿ-ಅಮುಲ್’ ವಿವಾದಕ್ಕೆ ಹೊಸ ತಿರುವು ಬರುವಂತೆ ತೋರುತ್ತಿದೆ.

Advertisement

ಅಮುಲ್ ಬ್ರಾಂಡ್ ಡೈರಿ ಉತ್ಪನ್ನಗಳಿಗೆ ಹೆಸರುವಾಸಿಯಾದ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟವು ಕ್ರಿಕೆಟ್ ಆಟದಲ್ಲಿ ಬಹಳ ಹಿಂದಿನಿಂದಲೂ ಇದೆ. 2011 ರಲ್ಲಿ ಆ ವರ್ಷದ ವಿಶ್ವಕಪ್​ನಲ್ಲಿನೆದರ್ಲ್ಯಾಂಡ್ಸ್ ಕ್ರಿಕೆಟ್ ತಂಡವನ್ನು ಪ್ರಾಯೋಜಿಸಿದ್ದರು. ಅಂದಿನಿಂದ ಹಿಂತಿರುಗಿ ನೋಡಿಲ್ಲ. ಅಮುಲ್ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನದಂತಹ ವಿವಿಧ ತಂಡಗಳೊಂದಿಗೆ ಪಾಲುದಾರಿಕೆ ಮತ್ತು ಸಹಯೋಗವನ್ನು ಹೊಂದಿದೆ.

2019 ರಲ್ಲಿ, ಅಮುಲ್ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಪ್ರಮುಖ ಪ್ರಾಯೋಜಕರಾಗಿದ್ದರು. ಕ್ರಿಕೆಟ್ ಪ್ರಾಯೋಜಕತ್ವಕ್ಕೆ ಕಾಲಿರಿಸಿರುವ ನಂದಿನಿ, “ಭಾರತ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಶ್ರೀಲಂಕಾ, ನೇಪಾಳ, ಓಮನ್, ನೆದರ್ಲ್ಯಾಂಡ್ಸ್, ಉಗಾಂಡಾ ಮತ್ತು ನಮೀಬಿಯಾ ಸೇರಿದಂತೆ ಒಂದು ಅಥವಾ ಎರಡು ತಂಡಗಳನ್ನು ಹುಡುಕುತ್ತಿದೆ. ನಾವು ಟೆಂಡರ್ ಕರೆದಿದ್ದೇವೆ. ಅದು ಅಂತಿಮ ಹಂತದಲ್ಲಿದೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆದ ನಂತರ ನಾವು ಮುಂದುವರೆಯುತ್ತೇವೆ” ಎಂದುಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಟಿ20 ವಿಶ್ವಕಪ್ 2024 ಈ ವರ್ಷದ ಜೂನ್ 1 ರಿಂದ ಜೂನ್ 29 ರ ನಡುವೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ದೇಶಗಳಲ್ಲಿ ನಡೆಯಲಿವೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ