Featured
ಚಿಲ್ಟುಗಳ ಮಾತು ನಾವ್ ಕೇಳಬೇಕಾ..? : ಕಾಂಗ್ರೆಸ್ ಸಭೆಯಿಂದ ಸಿಟ್ಟಾಗಿ ಹೊರನಡೆದ ಮುನಿಯಪ್ಪ, ಹರಿಪ್ರಸಾದ್..!

ಬೆಂಗಳೂರು : ಕಾಂಗ್ರೆಸ್ನಲ್ಲಿ ಸದ್ಯಕ್ಕೆ ಭಿನ್ನಮತ ಶಮನವಾಗೋ ಲಕ್ಷಣಗಳು ಕಾಣ್ತಿಲ್ಲ. ಅಲ್ಲದೆ, ಮೂಲ ಹಾಗೂ ವಲಸಿಗರ ಮಧ್ಯೆ ಕಿತ್ತಾಟ ಜೋರಾಗಿಯೇ ನಡೀತಿದೆ. ಇವತ್ತು ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಿರಿಯರ ಸಭೆಯಲ್ಲಿ ಅಸಮಾಧಾನ ಹೊರಬಿದ್ದಿದ್ದು, ಸಭೆ ಆರಂಭವಾದ ಕೆಲವೇ ನಿಮಿಷಗಳಿಗೆ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಹಾಗೂ ಬಿ.ಕೆ. ಹರಿಪ್ರಸಾದ್ ಹೊರ ನಡೆದಿದ್ದಾರೆ. ಇದರಿಂದ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ, ಕಾಂಗ್ರೆಸ್ ಕೂಡ ಒಡೆದ ಮನೆಯಾಗಿದೆ ಅನ್ನೋದು ಬಹಿರಂಗವಾಗಿದೆ.
ನಮಗಿಂತ ಚಿಕ್ಕವರು, ಚಿಲ್ಟುಗಳು ಎನಿಸಿಕೊಂಡವರು ನಮಗೇ ಸಲಹೆ ಕೊಡ್ತಾರೆ. ನಾವು ಅವರ ಮಾತಿಗೆ ತಲೆಯಾಡಿಸಬೇಕಾ..? ಎಂದು ಅಸಮಾಧಾನವನ್ನ ಹೊರ ಹಾಕಿದ್ದಾರೆ. ಪ್ರಮುಖವಾಘಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಸಿಟ್ಟು ಮಾಡಿಕೊಂಡಿರೋ ಮುನಿಯಪ್ಪ ಹಾಗೂ ಹರಿಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ.
ಆದ್ರೆ, ಈ ಕುರಿತು ಮಾತ್ನಾಡಿರೋ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ನಮ್ಮ ಮಧ್ಯೆ ಯಾವುದೇ ಅಸಮಾಧಾನ ಇಲ್ಲ. ಹಿರಿಯರ ಸಲಹೆಯಂತೆ ನಾವು ಮುನ್ನಡೆಯುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅದೇನೇ ಆಗ್ಲಿ, ಬೈ ಎಲೆಕ್ಷನ್ ಬೆನ್ನಲ್ಲೇ ಮತ್ತೊಮ್ಮೆ ಕಾಂಗ್ರೆಸ್ನಲ್ಲಿ ಹಿರಿಯರು, ಕಿರಿಯರ ನಡುವೆ ಕಿತ್ತಾಟ ಜೋರಾಗಿಯೇ ನೀಡಿತಿದೆ. ಇದು ಎಲ್ಲಿಗೆ ಬಂದು ನಿಲ್ಲುತ್ತೋ ನೋಡಬೇಕಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?