ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ನಾಯಕ ಕೆ.ಎಲ್.ರಾಹುಲ್ ಅವರ ಆಕರ್ಷಕ ಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರ್ಸಿಬಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ದುಬೈನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಕೆ.ಎಲ್.ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಮೊದಲ ವಿಕೆಟ್ಗೆ 57 ಸೇರಿಸಿ ಭರ್ಜರಿ ಆರಂಭ ಕೊಟ್ಟರು.
ನಂತರ ಬಂದ ನಿಕೊಲೊಸ್ ಪೂರಾನ್ 17,ಗ್ಲೇನ್ ಮ್ಯಾಕ್ಸ್ ವೆಲ್ 5, ಕರುಣ್ ನಾಯರ್ 15 ರನ್ ಗಳಿಸಿದರು. ಕೊನೆಯವರೆಗೂ ರನ್ ಸುನಾಮಿ ಎಬ್ಬಿಸಿದ ಕೆ.ಎಲ್.ರಾಹುಲ್ಅಜೇಯ 132 ರನ್ ಗಳಿಸಿದರು. ಇದರೊಂದಿಗೆ ಟೂರ್ನಿಯಲ್ಲಿ ಮೊದಲ ಶತಕ ದಾಖಲಾಗಿದೆ.
207 ರನ್ಗಳ ಬಿಗ್ ಗುರಿ ಬೆನ್ನತ್ತಿದ ಆರ್ಸಿಬಿ ರವಿ ಬಿಶ್ನೊಯಿ ಮತ್ತು ಮುರ್ಗನ್ ಅಶ್ವಿನ್ ದಾಳಿಗೆ ತತ್ತರಿಸಿ ಹೋಯ್ತು. ಆ್ಯರಾನ್ ಫಿಂಚ್ 20, ಎಬಿಡಿ ವಿಲಿಯರ್ಸ್ 28,ವಾಷಿಂಗ್ಟನ್ ಸುಂದರ್ 30, ಶಿವಂ ದುಬೆ 12 ರನ್ ಗಳಿಸಿದ್ದು ಬಿಟ್ಟರೇ ಇನ್ನುಳಿದ ಆಟಗಾರರು ಒಂದಂಕಿ ರನ್ ಗಳಿಸಿದರು.
ಶತಕ ಸಿಡಿಸಿ ಅಬ್ಬರಿಸಿದ ಕೆ.ಎಲ್.ರಾಹುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?