International News
ಕೇಜ್ರಿವಾಲ್ ಪರ ಪ್ರತಿಭಟನೆಗೆ ಮುಂದಾದ ವಕೀಲರು : ಎಚ್ಚರಿಕೆ ನೀಡಿದ ಹೈಕೋರ್ಟ್

Delhi : ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಉದ್ದೇಶಿಸಿದ್ದ ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ವಕೀಲರಿಗೆ ದಿಲ್ಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅದು ಹೇಳಿದೆ.
ದಿಲ್ಲಿ ಲಿಕ್ಕರ್ ನೀತಿ ಹಗರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ವಕೀಲರಿಗೆ ದಿಲ್ಲಿ ಹೈಕೋರ್ಟ್ ಕಠಿಣ ಪರಿಣಾಮದ ಎಚ್ಚರಿಕೆ ನೀಡಿದೆ.
“ಕೋರ್ಟ್ನಲ್ಲಿ ಪ್ರತಿಭಟನೆ ಆಯೋಜಿಸಿದರೆ ಅದರ ಪರಿಣಾಮ ತೀವ್ರವಾಗಿರುತ್ತದೆ. ನ್ಯಾಯಾಲಯಗಳಿಗೆ ಅಡ್ಡಿಪಡಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳನ್ನು ತಡೆಯುವಂತಿಲ್ಲ. ನ್ಯಾಯಾಲಯವನ್ನು ಸಂಪರ್ಕಿಸುವ ಜನರ ಹಕ್ಕುಗಳನ್ನು ನಾವು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಮನಮೋಹನ್ ತೀಕ್ಷ್ಣವಾಗಿ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಕಾನೂನು ಘಟಕವು ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿತ್ತು. ಈ ವಿಚಾರವನ್ನು ದಿಲ್ಲಿ ಹೈಕೋರ್ಟ್ ಸಿಜೆ ಎದುರು ಪ್ರಸ್ತಾಪಿಸಿ ವಕೀಲ ವೈಭವ್ ಸಿಂಗ್, ನ್ಯಾಯಾಲಯಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಬಾರದು ಎಂದು ಪ್ರತಿಪಾದಿಸಿದರು. ಈ ಅರ್ಜಿಯನ್ನು ಗುರುವಾರ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸಿಜೆ ಹೇಳಿದರು.
“ಒಳ್ಳೆಯ ಉದ್ದೇಶಗಳು, ಸ್ವಾತಂತ್ರ್ಯದ ರಕ್ಷಣೆ, ಸಂವಿಧಾನವನ್ನು ಎತ್ತಿಹಿಡಿಯುವುದು ಹಾಗೂ ನ್ಯಾಯಾಂಗ ಅಥವಾ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಚಳವಳಿಗಳಲ್ಲಿ ವಕೀಲರು ಐತಿಹಾಸಿಕ ಪಾತ್ರ ವಹಿಸಿದ್ದಾರೆ. ಈ ಮೂಲಭೂತ ಸ್ತಂಭಗಳಿಗೆ ಅಪಾಯ ಎದುರಾದಾಗ ಬುದ್ಧಿಜೀವಿಗಳು ಎಂದು ಗುರುತಿಸಿಕೊಂಡ ವಕೀಲರು ಹಾಗೂ ಸಾಮಾಜಿಕ ನಾಯಕರು ಪ್ರತಿಭಟಿಸಿದ್ದಾರೆ” ಎಂದು ವಕೀಲರ ಪರಿಷತ್ತು ಹೇಳಿಕೆ ಬಿಡುಗಡೆ ಮಾಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?