ರೈಸಿಂಗ್ ಕನ್ನಡ:
ಬೆಂಗಳೂರು:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಧಾರಾವಾಡ, ಬೆಳಗಾವಿಯ ಕೆಲವು ಕಡೆ, ರಾಯಚೂರಿನ ಕೆಲವು ಕಡೆ, ಯಾದಗಿರಿ ಹೀಗೆ ರಾಜ್ಯದ ಹಲವೆಡೆ ಲಾಕ್ಡೌನ್ ಜಾರಿಯಲ್ಲಿದೆ. ಕಳೆದ ಮಂಗಳವಾರ ರಾತ್ರಿಯಿಂದ ಆರಂಭವಾದ ಲಾಕ್ಡೌನ್ ಜುಲೈ 22ರಂದು ಬೆಳಗ್ಗೆ 5ಗಂಟೆಗೆ ಮುಕ್ತಾಯವಾಗಲಿದೆ.
ಒಂದು ವಾರಗಳ ಲಾಕ್ಡೌನ್ಬಳಿಕ ಹಲವು ಪ್ರಶ್ನೆಗಳು ಎದ್ದಿವೆ. ರಾಜ್ಯ ಸರ್ಕಾರ ಲಾಕ್ಡೌನ್ ಮುಂದುವರೆಸುವ ಬಗ್ಗೆ ಆಸಕ್ತಿ ಕಳೆದುಕೊಂಡಿದೆ. ಮತ್ತೊಂದು ಕಡೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಲಾಕ್ಡೌನ್ನಿಂದ ಯಾವುದೇ ಲಾಭ ಇಲ್ಲ ಎಂದು ಸರ್ಕಾರ ಮನಗಂಡಿದೆ. ತಜ್ಞರ ಅಭಿಪ್ರಾಯಗಳನ್ನು ಕೂಡ ಸಂಗ್ರಹಿಸಲಾಗಿದೆ. ಲಾಕ್ಡೌನ್ ಹೊರತಾಗಿ ಪರ್ಯಾಯ ಮಾರ್ಗಗಳೇನು ಅನ್ನುವ ಬಗ್ಗೆ ದೊಡ್ಡ ಮಟ್ಟದ ಚಿಂತನೆ ನಡೆಯುತ್ತಿದೆ.
ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೊರೊನಾ ಕೇಸ್ಗಳು ಹೆಚ್ಚಳವಾಗುತ್ತಿದ್ದಂತೆ ಲಾಕ್ಡೌನ್ಗಾಗಿ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು. ಇದಕ್ಕೆ ಮಣಿದ ರಾಜ್ಯ ಸರ್ಕಾರ ಲಾಕ್ಡೌನ್ ಕೂಡ ಮಾಡಿತ್ತು. ಆದ್ರೆ ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೊರೊನಾ ಕೇಸ್ಗಳು ವೇಗದಲ್ಲಿ ಏರಿಕೆಯಾಗುತ್ತಿದೆ. ಅದನ್ನು ತಡೆಯಲು ಹರಸಾಸಹ ಮಾಡುತ್ತಿದೆ.
ಸಿಎಂ ಯಡಿಯೂರಪ್ಪ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇದಲ್ಲಿ ಕೆಲವೊಂದು ಮಹತ್ವದ ನಿರ್ಧಾರಗಳು ಹೊರಬೀಳಲಿವೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಂಡುಕೊಳ್ಳುವ ಪರ್ಯಾಯ ಮಾರ್ಗ ಯಾವುದು ಅನ್ನುವ ಬಗ್ಗೆ ಜನರಿಗೆ ಕುತೂಹಲ ಹೆಚ್ಚಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?