Featured
Lockdown : ಲಾಕ್ಡೌನ್ ಮುಂದುವರಿಸೋ ಪ್ರಶ್ನೆಯೇ ಇಲ್ಲ..! – ಸಂಜೆಯೇ ಮಾರ್ಗಸೂಚಿ ಬಿಡುಗಡೆ

ರೈಸಿಂಗ್ ಕನ್ನಡ :
ಬೆಂಗಳೂರು :
ಯಾವುದೇ ಕಾರಣಕ್ಕೂ ಬೆಂಗಳೂರಿನಲ್ಲಿ ಲಾಕ್ಡೌನ್ ವಿಸ್ತರಣೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಮುಂದಿನ ರೂಪರೇಷಗಳ ಮಾರ್ಗಸೂಚಿಯನ್ನ ಇಂದು ಸಂಜೆ ಪ್ರಕಟಿಸಲಾಗುವುದು ಎಂದಿದ್ದಾರೆ.
ಮಂಗಳವಾರ ಸಂಜೆ ರಾಜ್ಯಾದ್ಯಂತ ಲಾಕ್ಡೌನ್ ಮುಕ್ತಾಯ ಆಗಲಿದೆ. ಆದರೆ, ಉಪಮುಖ್ಯಮಂತ್ರಿ ಅಶ್ವಥನಾರಾಯಣ ಅವರು ಲಾಕ್ಡೌನ್ ಮುಂದುವರಿಕೆಯ ಸಾಧ್ಯತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಬುಧವಾರ ಲಾಕ್ಡೌನ್ ಸಡಿಲಿಕೆ ಆಗಿ ಜನಜೀವನ ಎಂದಿನಂತೆ ಇರಲಿದೆ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಲಾಕ್ಡೌನ್ ಮುಂದುವರಿಸಲ್ಲ. ಬುಧವಾರದಿಂದ ಏನೇನು ಕ್ರಮ ಕೈಗೊಳ್ಳಬೇಕೆಂದು ಸಿದ್ಧ ಮಾಡಿಕೊಂಡಿದ್ಧೇವೆ. ಮಂಗಳವಾರ ಸಂಜೆ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದು ಡಿಸಿಎಂ ಅಶ್ವಥ ನಾರಾಯಣ ಹೇಳಿದ್ಧಾರೆ.
ಕೊರೊನಾ ನಿಗ್ರಹಿಸಲು ಲಾಕ್ಡೌನ್ ಸಹಕಾರಿಯಾಗಿದ್ದು ನಿಜ. ಲಾಕ್ ಡೌನ್ನಿಂದ ನಮ್ಮ ವಲಯಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೆ, ಕೊರೊನಾಗೆ ಲಾಕ್ಡೌನ್ ಮಾತ್ರವೇ ಪರಿಹಾರ ಅಲ್ಲ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಒದಗಿಸುವುದು ಸೇರಿದಂತೆ ಹಲವು ಸವಾಲುಗಳಿವೆ. ಅವೆಲ್ಲವನ್ನೂ ಎದುರಿಸಿ ಕೊಕೊನಾ ನಿಯಂತ್ರಣಕ್ಕೆ ಕ್ರಮ ವಹಿಸಿದ್ದೇವೆ ಎಂದು ಡಿಸಿಎಂ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಿವಿಧ ಪಕ್ಷಗಳ ಶಾಸಕರು, ಜನಪ್ರತಿನಿಧಿಗಳು ಲಾಕ್ಡೌನ್ ಮುಂದುವರಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹಾಗೆಯೇ, ಕೆಲ ಅಧಿಕಾರಿವರ್ಗಗಳಲ್ಲೂ ಈ ಅಭಿಪ್ರಾಯ ಇದೆ. ಆದರೆ, ಸಿಎಂ ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡುವ ಕ್ರಮವನ್ನು ಒಪ್ಪುತ್ತಿಲ್ಲ. ಲಾಕ್ಡೌನ್ನಿಂದ ಆರ್ಥಿಕತೆಗೆ ಭಾರೀ ಹೊಡೆತ ಬೀಳುತ್ತದೆ. ಕೊರೊನಾ ಜೊತೆ ಇದ್ದುಕೊಂಡೇ ಹೋರಾಟ ಮಾಡಿ ಸೋಲಿಸೋಣ ಎಂಬುದು ಅವರ ಸಿಎಂ ಅಭಿಪ್ರಾಯವಾಗಿದೆ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?