ರೈಸಿಂಗ್ ಕನ್ನಡ:
ಧಾರಾವಾಡ:
ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಸೂಕ್ತ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಹಾಗೂ ಮುನ್ನೆಚ್ಚರಿಕೆ ವಹಿಸಲು ಅನುಕೂಲವಾಗುವಂತೆ 25.39 ಲಕ್ಷ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ರಕ್ಷಣಾ ಸಾಮಗ್ರಿಗಳನ್ನು ಖರೀದಿಸಲು ಧಾರವಾಡ ಜಿಲ್ಲೆಗೆ ಒಟ್ಟು ರೂ.35 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 25.39 ಲಕ್ಷದ 60 ಲೈಫ್ ಬೌಯ್, 60 ಲೈಫ್ ಜಾಕೆಟ್, 10 ಪೆಟ್ರೋಲ್ ಡ್ರೈವ್ ಚೈನ್ ಸಾ, 6 ಲೈನಾನ್ ರೋಪ್, 6 ಎಲ್.ಐ.ಡಿ. ಸರ್ಚ್ ಲೈಟ್, 6 ಬೋಲ್ಟ್ ಕಟರ್ಸ್, 200 ರೈನ್ ಕೋಟ್, ಬ್ಯಾಟರಿ ಆಪರೇಟೆಡ್ ಲೈಟ್, 2 ಇನ್ ಫ್ಲ್ಯಾಟಬಲ್ ಬೋಟ್, 2 ಒಬಿಎಮ್ ಮೋಟರ್ ಖರೀದಿಸಿ ಅಗ್ನಿ ಶಾಮಕ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್, ಅಬ್ಬಯ್ಯ ಪ್ರಸಾದ್, ಜಿಲ್ಲಾಧಿಕಾರಿ ದೀಪಾ ಚೋಳನ್, ಮುಖ್ಯ ಅಗ್ನಿಶಾಮಕ ಅಧಿಕಾರಿ ಈಶ್ವರ ನಾಯಕ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಶ್ರೀಕಾಂತ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ವಿನಾಯಕ ಹಟ್ಟೆಕಾರ್, ವಿನಾಯಕ, ಚಂದ್ರಶೇಖರ್ ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ಉಪಸ್ಥಿತರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?