ರೈಸಿಂಗ್ ಕನ್ನಡ:
ಯಾದಗಿರಿ:
ಪ್ರವಾಹದಿಂದ ತತ್ತರಿಸಿದ್ದ ಯಾದಗಿರಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹಾಗೂ ಸಂಸದ ಅಮರೇಶ್ವರ ನಾಯಕ ಅವರು ಪ್ರವಾಹ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ಸೇತುಗೆ ಭೇಟಿ ನೀಡಿ ಪ್ರವಾಹ ಹಾನಿ ಪ್ರದೇಶವನ್ನು ವೀಕ್ಷಿಸಿದರು. ಮಹಾರಾಷ್ಟ್ರದಲ್ಲಿ ಸುರಿದ ಮಹಾಮಳೆಗೆ ಕೃಷ್ಣಾ ನದಿಯಲ್ಲಿ ಮೊನ್ನೆ ಪ್ರವಾಹ ಉಲ್ಬಣಿಸಿತ್ತು.
ನದಿ ತೀರದ ಜಮೀನಿಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿತ್ತು. ಅಲ್ಲದೆ ನದಿ ದಡದಲ್ಲಿನ ಪಂಪಸೇಟ್, ಪೈಪ್ಗಳು ಪ್ರವಾಹದಲ್ಲಿ ಕೊಚ್ವಿ ಹೋಗಿದ್ದು ರೈತರಿಗೆ ಸಾಕಷ್ಟು ನಷ್ಟವಾಗಿದೆ. ಪ್ರತಿಬಾರಿಯೂ ಕೃಷ್ಣಾ ನದಿಯಲ್ಲಿ ಪ್ರವಾಹ ಬಂದ್ರೆ ಕೊಳ್ಳುರು ಸೇತುವೆ ಜಲಾವೃತ ಆಗುತ್ತೆ. ಹೀಗಾಗಿ ರಾಯಚೂರು-ಯಾದಗಿರಿ ಸಂಪರ್ಕ ಕಡಿತಗೊಳ್ಳುತ್ತದೆ.
ನೂತನ ಸೇತುವೆ ನಿರ್ಮಾಣಕ್ಕೆ ಜನರು ಒತ್ತಾಯಿಸುತ್ತಿದ್ದಾರೆ. ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಕಳಿಸಲಾಗುವುದು ಎಂದಿದ್ದಾರೆ. ಇನ್ನು ಮಳೆ ಮತ್ತು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನೆ ಸಚಿವರು ರೈತರಿಗೆ ಭರವಸೆ ನೀಡಿದರು.
ರಾಯಚೂರು ಲೋಕಸಭಾ ಸಂಸದ ರಾಜಾ ಅಮರೇಶ್ವರ ನಾಯಕ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮತ್ತು ಇತರರು ಇದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?