Featured
ಮಿಸ್ಟರ್ ಯಡಿಯೂರಪ್ಪ, ಅಮಿತ್ ಶಾ ರಾಜೀನಾಮೆ ನೀಡಲಿ : ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 100 ದಿನ ಆಡಳಿತ ಪೂರೈಸಿರೋ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅನರ್ಹ ಶಾಸಕರ ವಿಚಾರವಾಗಿ, ನಿನ್ನೆಯಷ್ಟೇ ಯಡಿಯೂರಪ್ಪ ಅವರ ಆಡಿಯೋ ಬಿಡುಗಡೆ ಆಗಿತ್ತು. ಇದರಲ್ಲಿ 17 ಅನರ್ಹ ಶಾಸಕರಿಗೆ ಬೆನ್ನೆಲುಬಾಗಿ ಬಿಜೆಪಿ ಹಾಗೂ ಅಮಿತ್ ಶಾ ಇದ್ದಾರೆ ಅನ್ನೋದನ್ನ ಸ್ವತಃ ಯಡಿಯೂರಪ್ಪ ಆಡಿಯೋದಲ್ಲಿ ಹೇಳಿದ್ರು.
ಇದೀಗ ಬಿಜೆಪಿ ಆಪರೇಷನ್ ಮಾಡಿರೋದನ್ನ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಮೊದಲು 17 ಶಾಸಕರ ರಾಜೀನಾಮೆಗೆ ನಮಗೂ ಸಂಬಂಧ ಇಲ್ಲ ಎನ್ನುತ್ತಿದ್ದ ಯಡಿಯೂರಪ್ಪ, ಈಗ ಏನ್ ಹೇಳ್ತಾರೆ ಎಂದು ಸಿದ್ದು ಪ್ರಶ್ನೆ ಮಾಡಿದ್ದಾರೆ.
ಎರಡೂವರೆ ತಿಂಗಳು ಶಾಸಕರನ್ನ ಅಮಿತ್ ಶಾ ಅವರೇ ರಕ್ಷಣೆ ಮಾಡಿದ್ದಾರೆ. ಪಾಪ ಅವರ ತ್ಯಾಗದಿಂದಲೇ ಸರ್ಕಾರ ಬಂದಿರೋದು ಎಂದಿದ್ದಾರೆ. ಇದನ್ನ ಹೇಳಿರೋದು ಮಿಸ್ಟರ್ ಯಡಿಯೂರಪ್ಪ. ಶಾಸಕರ ಖರೀದಿಯಲ್ಲಿ ಬಿಜೆಪಿಯವರು ಇನ್ವಾಲ್ ಆಗಿದ್ದಾರೆ. ಯಡಿಯೂರಪ್ಪ ಮತ್ತು ಅಮಿತ್ ಶಾ ಇಬ್ಬರೂ ಸೇರಿ ಪ್ರಜಾಪ್ರಭುತ್ವವನ್ನೇ ನಾಶ ಮಾಡಿದ್ದಾರೆ. ಇದಕ್ಕೆ ಬೇರೇನು ಸಾಕ್ಷಿ ಬೇಕಿದೆ. ಎಲ್ಲವೂ ವಾಸ್ತವವೇ ಆಗಿದೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?