Featured
“ಪಾರದರ್ಶಕ ತೆರಿಗೆ – ಪ್ರಾಮಾಣಿಕರಿಗೆ ಗೌರವ” – ತೆರಿಗೆ ಸುಧಾರಣೆಗೆ ಹೊಸ ಯೋಜನೆ..!

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತರಲಿದೆ. ನೇರ ತೆರಿಗೆ ನೀತಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗುತ್ತಿದೆ. ಪಾರದರ್ಶಕ ತೆರಿಗೆ – ಪ್ರಾಮಾಣಿರಿಗೆ ಸನ್ಮಾನ ಎಂಬ ವೇದಿಕೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಹಾಗೆಯೇ, ತೆರಿಗೆ ಪಾವತಿದಾರರ ಸನ್ನದು ಮತ್ತು ಅಜ್ಞಾತ ಮೌಲ್ಯಮಾಪನ ವ್ಯವಸ್ಥೆಗೂ ಚಾಲನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುವವರನ್ನ ಗೌರವಿಸಲು ಹಾಗೂ ತೆರಿಗೆ ಪಾವತಿಯಲ್ಲಿ ಪ್ರಾಮಾಣಿಕತೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ನಮ್ಮ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಲು ಹಾಗೂ ಸುಧಾರಣೆ ತರಲು ಇದು ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ದೇಶದ ಪ್ರಾಮಾಣಿಕ ತೆರಿಗೆ ಪಾವತಿದಾರನಿಗೆ ಈ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ಇದೆ. ಇಂತಹ ಪ್ರಾಮಾಣಿಕರಿಗೆ ಗೌರವ ಸಲ್ಲಿಸಲು ಸರ್ಕಾರಕ್ಕಿರುವ ಬದ್ಧತೆ ಇವತ್ತು ಮತ್ತೊಮ್ಮೆ ತೋರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ವಿಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ವ್ಯಾಪಾರ ಸಂಘಟನೆಗಳು, ಚಾರ್ಟರ್ಡ್ ಅಕೌಂಟೆಂಟ್ಗಳ ಸಂಘಟನೆಗಳು, ಗಣ್ಯ ತೆರಿಗೆ ಪಾವತಿದಾರರು, ವಾಣಿಜ್ಯ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?