Featured
MTB ನಾಗರಾಜ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯ್ಕೆ- ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ಸಂಭ್ರಮ

ರೈಸಿಂಗ್ ಕನ್ನಡ:
ರವಿ.N. ಕೆ.ಆರ್.ಪುರಂ
ವಿಧಾನಪರಿಷತ್ತಿಗೆ ಮಾಜಿ ಸಚಿವ MTB ನಾಗರಾಜ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಯಲ್ಲಿ, ಅವರ ಅಭಿಮಾನಿಗಳು ಸಿಹಿತಿನ್ನಿಸಿ ಸಂಭ್ರಮಿಸಿದರು. ಬೆಂಗಳೂರು ನಗರದ ಗರುಡಾಚಾರ್ ಪಾಳ್ಯದ MTB ನಾಗರಾಜ್ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು. ನೂತನ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ MTB ನಾಗರಾಜ್ರವರಿಗೆ ಹೂ ಗುಚ್ಚಗಳನ್ನು ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ MTB ನಾಗರಾಜ್. ಕಳೆದ ಆರು ತಿಂಗಳ ಹಿಂದೆ ಉಪ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದೆ. ಮಾನ್ಯ ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದರು. ಅದರಂತೆ ವಿಧಾನಪರಿಷತ್ ಸದಸ್ಯ ರಾಗಿ ಆಯ್ಕೆಯಾಗಿದ್ದೇನೆ . ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದು ಅಲ್ಲಿಯವರೆಗೂ ಕಾಯುತ್ತೇನೆ.ಇಂತದ್ದೆ ಇದೇ ಖಾತೆ ನೀಡಿ ಎಂದು ನಾನು ಕೇಳಲ್ಲ ಅವರು ಯಾವುದೇ ಖಾತೆ ನೀಡಿದರು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು. ಹೊಸಕೋಟೆ ನಗರದಲ್ಲಿ ಹೆಚ್ಚು ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಯಾಗುತ್ತಿದ್ದು ಸಾರ್ವಜನಿಕರು.ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು. ಕರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದು ಕೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದರು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?