ರೈಸಿಂಗ್ ಕನ್ನಡ ವೆಬ್ :
ಕೊಪ್ಪಳ :
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಶುರುವಾಗಿದೆ. ಬುಧವಾರ ಸೋಂಕಿತ ಮಹಿಳೆಯನ್ನು ಬಲಿ ಪಡೆದ ಕೊರೊನಾ ಮತ್ತೇ ಆರು ಜನರಿಗೆ ತಗುಲಿದೆ. ಜೂನ್ 16ರಂದು ಆಂಧ್ರಪ್ರದೇಶದ ವಿಜಯವಾಡದಿಂದ ಗಂಗಾವತಿ ತಾಲೂಕಿನ ಶ್ರೀರಾಮನಗರಕ್ಕೆ ಬಂದಿದ್ದ 45 ವರ್ಷದ ವ್ಯಕ್ತಿ, 40 ವರ್ಷದ ಮಹಿಳೆ ಮತ್ತು 17 ವರ್ಷದ ಯುವತಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ.
ಬಳ್ಳಾರಿ ಜಿಲ್ಲೆಯ ಮಲಪನಗುಡಿಯಿಂದ ಹುಲಗಿಗೆ ಜೂನ್ 14ರಂದು ಆಗಮಿಸಿದ್ದ ಹುಲಗಿಯ 65 ವರ್ಷದ ವ್ಯಕ್ತಿಗೆ, ಜೂನ್ 12ರಂದು ಜಿಂದಾಲ್ನಿಂದ ಬಂದಿದ್ದ ಹೊಸಲಿಂಗಾಪುರದಲ್ಲಿ 38 ವರ್ಷದ ವ್ಯಕ್ತಿಗೆ ಹಾಗೂ ಜೂನ್ 16ರಂದು ಬೆಂಗಳೂರಿನಿಂದ ಬಂದಿದ್ದ ಕುಕನೂರಿನ ಕಕ್ಕಿಹಾಳದ 14 ವರ್ಷದ ಬಾಲಕನಿಗೆ ಒಬ್ಬರಿಗೆ ಕೊರೊನಾ ಸೋಂಕಿರುವುದು ಧೃಡಪಟ್ಟಿದೆ.
ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಆರು ಜನ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಜಿಲ್ಲಾಡಳಿತ ಪತ್ತೆ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28ಕ್ಕೇರಿದೆ. ಇದರಲ್ಲಿ 11 ಜನ ಗುಣಮುಖರಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 16ಕ್ಕೆ ಏರಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?