Connect with us

Featured

100 ರೂಪಾಯಿಗೂ ಕೇಳೋರಿಲ್ಲ ರೇಷ್ಮೆ ಗೂಡು- ಚೀನಾ ರೇಷ್ಮೆಯಿಂದ ರಾಜ್ಯದ ರೈತರು ಕಂಗಾಲು

ರೈಸಿಂಗ್​ ಕನ್ನಡ:

ಹರೀಶ್​​​, ರಾಮನಗರ:

Advertisement

ರೇಷ್ಮೆ ಬಟ್ಟೆ ಬೇಕು… ರೇಷ್ಮೆ ನೂಲಿನ ಪಂಚೆ, ಶಲ್ಯ ಎಲ್ಲವೂ ಬೇಕು.. ಆದ್ರೆ ರೇಷ್ಮೆ ಬೆಳೆಗಾರನ ಗೋಳು ಮಾತ್ರ ಯಾರಿಗೂ ಬೇಡ. ಕೊರೊನಾ ಮಹಾಮಾರಿ ಟೈಮ್​ನಲ್ಲಂತೂ ರೇಷ್ಮೆ ಬೆಳೆಗಾರರು ಕಂಗೆಟ್ಟು ಹೋಗಿದ್ದಾರೆ. ಹಾಕಿದ ಅಸಲು ಕೂಡ ವಾಪಾಸ್​ ಬಾರದೇ ಇರುವ ದುಃಸ್ಥಿತಿಗೆ ರೇಷ್ಮೆ ಬೆಳೆಗಾರರು ಬಂದು ನಿಂತಿದ್ದಾರೆ. ಚೀನಾದ ರೇಷ್ಮೆ ಕರ್ನಾಟಕದ ರೇಷ್ಮೆ ಬೆಳಗಾರರ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಬೆಲೆ ಕುಸಿತ, ರೋಗಬಾಧೆ, ಕೀಟಗಳ ಕಾಟದಿಂದ ತತ್ತರಿಸಿದ್ದ ರೇಷ್ಮೆ ಬೆಳೆಗಾರರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋವಿಡ್-19 ನಿಂದ ಜನರು ತೊಂದರೆ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ರೇಷ್ಮೆ ನಗರಿ ರಾಮನಗರ ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತೊಂದು ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ಕೆ.ಜಿ ರೇಷ್ಮೆ ಬೆಳೆಯಲು ಒಬ್ಬ ರೈತ ಸುಮಾರು 300 ರೂಪಾಯಿ ಖರ್ಚು ಮಾಡುತ್ತಾನೆ. ಆದ್ರೆ, 300 ರೂ ಖರ್ಚು ಮಾಡಿ, ರೇಷ್ಮೇ ಗೂಡನ್ನು ಮಾರುಕಟ್ಟೆಗೆ ಮಾರಾಟಕ್ಕೆ ತಗೆದುಕೊಂಡು ಹೋದರೆ, ಕೇವಲ 100-150 ರೂ ಮಾತ್ರ  ಸಿಗುತ್ತಿದೆ. ಹೀಗಾಗಿ ರೇಷ್ಮೆ ಬೆಳೆಗಾರರು ಈ ಇದರಿಂದ  ವಿಮುಖವಾಗುವಂತಹ ಸಂದಿಗ್ದ ಪರಿಸ್ಥಿತಿ ಎದುರಾಗಿದೆ. ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಮಿಶ್ರತಳಿಯ ಗೂಡು ಪ್ರತಿ ಕೆ.ಜಿ 150 ರೂಗಳಂತೆ ಮಾರಾಟ ನಡೆಯುತ್ತಿದೆ. ದ್ವಿತಿಯ ತಳಿ ಗೂಡು ಸರಾಸರಿ ಪ್ರತಿ ಕೆ.ಜಿಗೆ 230 ರೂಗಳಂತೆ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗೆ, ರೇಷ್ಮೆ ಧಾರಣೆಯೂ ಕಳೆದ ಒಂದು ದಶಕದ ಅವಧಿಯಲ್ಲಿಯೇ ಕನಿಷ್ಟ ಮಟ್ಟಕ್ಕೆ ಕುಸಿದಿದ್ದು, ರೈತರು ಕಂಗೆಟ್ಟಿದ್ದಾರೆ.

Advertisement

ಅಂದಹಾಗೆ, ರಾಮನಗರ ಜಿಲ್ಲೆ ಸೇರಿದಂತೆ ದಕ್ಷಿಣ ಕರ್ನಾಟಕದ ಭಾಗದಲ್ಲಿ ಹೆಚ್ಚಾಗಿ ಮಿಶ್ರ ತಳಿಯ ಗೂಡುಗಳನ್ನೇ ಬೆಳೆಯಲಾಗುತ್ತದೆ. ಉತ್ತರ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ, ಬೇರೆ ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ದ್ವಿತೀಯ ತಳಿ ಗೂಡು ಹೆಚ್ಚಿನ ಪ್ರಮಾಣದಲ್ಲಿ ಬರುತ್ತದೆ. ಕಳೆದ ವರ್ಷ ಮಿಶ್ರ ತಳಿಗೂಡಿಗೆ 350-400 ಹಾಗೂ ದ್ವಿತಿಯ ತಳಿಯಗೂಡಿಗೆ 650 ರೂ ವರೆಗೆ ಮಾರಾಟ ಕಂಡಿತ್ತು. ಆದ್ರೆ, ಈಗ ಧಾರಣೆ ಅರ್ಧಕ್ಕೆ ಕುಸಿದಿದೆ. ಗೂಡಿನ ಉದ್ಪಾದನಾ ವೆಚ್ಚವೇ 300 ರೂಪಾಯಿಯಾಗುತ್ತದೆ. ಆದ್ರೆ, ಇದೀಗ ಮಾರುಕಟ್ಟೆಯಲ್ಲಿ 100 ರೂಗೆ ಮಾರಾಟವಾಗುತ್ತಿದೆ.

ಇದರಿಂದಾಗಿ ರೈತರು ರೇಷ್ಮೆ ಹುಳುಗಳನ್ನ ರಸ್ತೆಗೆ  ಚೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ. ಮತ್ತೊಂದೆಡೆ ಚೀನಾ ಅ್ಯಪ್ ಗಳನ್ನ ಬ್ಯಾನ್ ಮಾಡಿದ ರೀತಿಯಲ್ಲಿ ಚೀನಾದಿಂದ ಬರುವ ರೇಷ್ಮೆ ಗೂಡನ್ನ ಸಂಪೂರ್ಣವಾಗಿ ಬ್ಯಾನ್ ಮಾಡಿದರೆ ರಾಜ್ಯದ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ.

Advertisement

ಒಟ್ಟಾರೆ, ಕರೋನಾದಿಂದಾಗಿ ರೇಷ್ಮೆ ಬೆಳೆಗಾರರು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೆ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆಯೂ ಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾರ ರೀತಿ ನಿರ್ಧಾರ ತಗೆದುಕೊಳ್ಳಲಿದೆ ಎಂಬುದನ್ನ ಕಾದು ನೋಡಬೇಕಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ