ರೈಸಿಂಗ್ ಕನ್ನಡ :
ಬೆಂಗಳೂರು :
ಬೆಂಗಳೂರಿನಲ್ಲಿ ಯಾವುದೇ ಲಾಕ್ಡೌನ್ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ಸೋಂಕು ದೃಢಪಟ್ಟ ಕೂಡಲೇ ಅವರನ್ನು ಆರರಿಂದ ಏಳು ಗಂಟೆಯೊಳಗೆ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗುವುದು, ಆದ್ರೆ ಬೆಂಗಳೂರನ್ನ ಲಾಕ್ಡೌನ್ ಮಾಡೋದಿಲ್ಲ ಎಂದಿದ್ದಾರೆ. ಜೊತೆಗೆ ಹೆಚ್ಚುವರಿ 100 ಆ್ಯಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಉಳಿದಂತೆ ಮೆಡಿಕಲ್ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಬೆಡ್ಗಳಿರುವ ಬಗ್ಗೆ ಮಾಹಿತಿ ಇದೆ. ಆಸ್ಪತ್ರೆಗಳ ಜೊತೆ ಮಾತನಾಡಿ 5 ಸಾವಿರ ಬೆಡ್ ಪಡೆಯಲಾಗುತ್ತದೆ, ಕೆಲವರು ಅದಾಗಲೇ ನೀಡುತ್ತಿದ್ದಾರೆ ಎಂದಿದ್ದಾರೆ.
ಕೊರೊನಾ ಸೋಂಕಿತರ ಪೈಕಿ ಶೇ.61ರಷ್ಟು ಜನ ಗುಣಮುಖರಾಗುತ್ತಿದ್ದು, ರಾಜ್ಯದಲ್ಲಿ ಕೇವಲ 3,700 ಸಕ್ರಿಯ ಪ್ರಕರಣಗಳಿವೆ. ನಾಳೆಯ ಮಧ್ಯಾಹ್ನ ಬೆಂಗಳೂರಿನ ಎಲ್ಲ ಲೋಕಸಭಾ ಕ್ಷೇತ್ರಗಳ ಸಂಸದರು ಮತ್ತು ವಿಧಾನಸಭಾ ಕ್ಷೇತ್ರಗಳ ಶಾಸಕರೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ. ಯಾವ ವಾರ್ಡ್ಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತತೆ, ಅಂತ ಕಡೆ ಸೀಲ್ಡೌನ್ ಮಾಡಲಾಗುವುದು. ಈಗಾಗಲೇ 6 ವಾರ್ಡ್ಗಳನ್ನ ಸೀಲ್ಡೌನ್ ಮಾಡಿದ್ದೇವೆ ಎಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?