Featured
ಉತ್ತರ ಕನ್ನಡದಲ್ಲಿ ಕೊರೊನಾ ಫುಲ್ ಕಂಟ್ರೋಲ್ – ಲಾಕ್ಡೌನ್ ಪ್ರಶ್ನೆಯೇ ಇಲ್ಲ : ಶಿವರಾಮ್ ಹೆಬ್ಬಾರ್

ರೈಸಿಂಗ್ ಕನ್ನಡ :
ಭಟ್ಕಳ:
ಉತ್ತರಕನ್ನಡ ಜಿಲ್ಲೆಯನ್ನ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಆತಂಕ ಹೆಚ್ಚಾಗಿರುವ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗುತ್ತಿದೆ. ಆದರೆ ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿರುವುದರಿಂದ ಹೊಸ ಲಾಕ್ಡೌನ್ ಜಾರಿ ಇಲ್ಲ ಎಂದಿದ್ದಾರೆ.

ಆದರೆ ಜಿಲ್ಲೆಯ ಭಟ್ಕಳದಲ್ಲಿ ಮಾತ್ರ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ಈಗಾಗಲೇ ಮಧ್ಯಾಹ್ನ 2 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಲಾಕ್ಡೌನ್ ಜಾರಿಯಲ್ಲಿದ್ದು ಇದೇ ನಿಯಮ ಯಥಾವತ್ತು ಜಾರಿಯಲ್ಲಿರಲಿದೆ. ಉಳಿದಂತೆ ಇತರೆ ತಾಲ್ಲೂಕುಗಳಲ್ಲಿ ಸ್ವಯಂ ಲಾಕ್ಡೌನ್ಗೆ ವಿವಿಧ ಸಂಘಟನೆಗಳು ಮುಂದಾಗಿರುವ ಹಿನ್ನಲೆ ಜಿಲ್ಲಾಡಳಿತ ಸಂಘಟನೆಗಳ ನಿರ್ಧಾರಕ್ಕೆ ಬೆಂಬಲ ಸೂಚಿಸಿದೆ.
ಹೀಗಾಗಿ ಸರ್ಕಾರಿ ನಿಯಮದಂತೆ ಭಟ್ಕಳದಲ್ಲಿ ಮಾತ್ರ ಅರ್ಧ ದಿನದ ಲಾಕ್ಡೌನ್ ಇದ್ದು ಉಳಿದ ತಾಲ್ಲೂಕುಗಳಲ್ಲಿ ಸ್ವಯಂ ಲಾಕ್ಡೌನ್ ಮುಂದುವರೆಯಲಿದೆ ಅಂತಾ ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?