ರೈಸಿಂಗ್ ಕನ್ನಡ :
ಬೆಂಗಳೂರು :
ಕರ್ನಾಟಕದಲ್ಲಿ ಇನ್ನು ಮುಂದೆ ಲಾಕ್ಡೌನ್ ಇರೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್-19 ಹಿನ್ನಲೆಯಲ್ಲಿ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಬೆಂಗಳೂರು ಅಷ್ಟೇ ಅಲ್ಲ, ರಾಜ್ಯದ ಯಾವ ಭಾಗದಲ್ಲೂ ಇನ್ನು ಮುಂದೆ ಲಾಕ್ಡೌನ್ ಇರೋದಿಲ್ಲ ಎಂದಿದ್ದಾರೆ.
ಲಾಕ್ಡೌನ್ನಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬರುತ್ತೆ ನಿಜ, ಆದ್ರೆ ಆರ್ಥಿಕ ಕ್ರೂಢೀಕರಣ ಸವಾಲಿನ ವಿಷ್ಯ ಎಂದಿರುವ ಮುಖ್ಯಮಂತ್ರಿಗಳು, ಸಾಮಾಜಿಕ ಅಂತರ ಮತ್ತು ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ, ಇತರ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಕೊರೊನಾ ವಿರುದ್ಧ ನಮ್ಮ ಹೋರಾಟವನ್ನ ಮುಂದುವರಿಸಬೇಕು ಎಂದಿದ್ದಾರೆ.
ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಂದೇಶವನ್ನ ರವಾನಿಸಲಾಗಿದ್ದು. ತಮ್ಮ ತಮ್ಮ ಜಿಲ್ಲೆಗಳಲ್ಲಿ ಸೂಕ್ತ ಅಧಿಕಾರಿಗಳ ಜೊತೆ ಸೇರಿಕೊಂಡು ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದಿದ್ದಾರೆ. ಲಾಕ್ಡೌನ್ ವಿಷ್ಯವನ್ನ ಬಿಟ್ಟು, ಸೀಲ್ಡೌನ್ ಇರೋ ಪ್ರದೇಶದಲ್ಲಿ ಮಾತ್ರ ಜಾಗರೂಕರಾಗಿರಿ ಎಂದು ಸಂದೇಶ ಸಾರಿದ್ದಾರೆ.
ಬೆಂಗಳೂರು ಈಗ 8 ವಲಯಗಳಲ್ಲಿ ವಿಂಗಡಣೆ
ಇನ್ನೂ ರಾಜಧಾನಿ ಬೆಂಗಳೂರನ್ನ 8 ವಲಯಗಳಾಗಿ ವಿಂಗಡಿಸಿ. ಒಂದೊಂದು ವಲಯಕ್ಕೂ ಒಬ್ಬೊಬ್ಬರು ಸಚಿವರು ಮತ್ತು ಅಧಿಕಾರಿಗಳನ್ನ ನೇಮಿಸಲಾಗಿದೆ. ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಸೂಕ್ತವಾಗಿ ಕಾರ್ಯ ನಿರ್ವಹಿಸಲೂ ಈ ಸಚಿವರು ಮತ್ತು ಅಧಿಕಾರಿಗಳು ಶ್ರಮ ಹಾಕಲಿದ್ದಾರೆ ಎಂದಿದ್ದಾರೆ ಸಿಎಂ ಬಿ.ಎಸ್ ಯಡಿಯೂರಪ್ಪ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?