Featured
ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ – ಇದು ಸ್ವತಃ ಆರೋಗ್ಯ ಸಚಿವರೇ ಮಾಡಿರೋ ಟ್ವೀಟ್..!

ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಬಗ್ಗೆ ನಿರ್ಲಕ್ಷ್ಯ ಯಾವುದೇ ಕಾರಣಕ್ಕೂ ಬೇಡವೇ ಬೇಡ. ಯಾಕಂದ್ರೆ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಲೇ ಇದೆ. ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ಗೆ ರಾಜ್ಯ ಸರ್ಕಾರ ಚಿಂತಿಸಿದೆ. ಸ್ವತಃ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಜ ಬಿ. ಶ್ರೀರಾಮುಲುರವರೇ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು ಲಾಕ್ಡೌನ್ ಬಗ್ಗೆ ಚಿಂತಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
”ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುಳವಾಗುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಮತ್ತೊಮ್ಮೆ ಲಾಕ್ಡೌನ್ ಬಗ್ಗೆ ಚಿಂತಿಸಲಾಗುತ್ತಿದೆ. ಈ ಬಗ್ಗೆ ಟಾಸ್ಕ್ಫೋರ್ಸ್ ಸಭೆ, ತಜ್ಞರು ಮತ್ತು ಮಾನ್ಯ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೊನಾ ಸೋಂಕು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸೂಕ್ತವಾದ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವ ಮೂಲಕ ನಿಯಂತ್ರಣ ಕಾರ್ಯಕ್ಕೆ ಕೈಜೋಡಿಸಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಜ ಬಿ. ಶ್ರೀರಾಮುಲುರವರು ತಿಳಿಸಿದ್ದಾರೆ.”
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?