Connect with us

ರಾಜಕೀಯ

ಆತ್ಮ ಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿ ಮತ ಕೊಟ್ಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Bengalore : ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

“ಬಿಜೆಪಿಯವರು ತಮ್ಮ ಅಭ್ಯರ್ಥಿ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು. ಮೈತ್ರಿ ಅಭ್ಯರ್ಥಿ ನಿಲ್ಲಿಸಿದ್ದೆ ಬಿಜೆಪಿ ಬೆಂಬಲದೊಂದಿಗೆ ಅಲ್ಲವೇ? ಬಿಜೆಪಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಲ್ಲವೇ? ಆದರೆ ಬಿಜೆಪಿ ತಮ್ಮ ಪಕ್ಷಕ್ಕೆ 48 ಮತಗಳನ್ನು ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ” ಎಂದು ತಿಳಿಸಿದರು.

ಸೋಮಶೇಖರ್ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಕೇಳಿದಾಗ, “ಅಡ್ಡಮತದಾನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ನನ್ನ ಮತವನ್ನಷ್ಟೇ ನೋಡಿದ್ದೇನೆ. ಪಕ್ಷೇತರರ ಮತವನ್ನು ನಾನು ನೋಡಿಲ್ಲ. ಹೀಗಿರುವಾಗ ಅಡ್ಡಮತದಾನದ ಬಗ್ಗೆ ನನಗೇನು ಗೊತ್ತು? ಬಿಜೆಪಿಯವರನ್ನೇ ಕೇಳಿ. ಅವರೇ ಅಲ್ಲವೇ ಆತ್ಮಸಾಕ್ಷಿ ಮತ ಕೇಳಿದ್ದು” ಎಂದು ತಿಳಿಸಿದರು.

ನಿಮ್ಮ ಪಕ್ಷಕ್ಕೆ ಆತ್ಮಸಾಕ್ಷಿ ಮತ ಬಂದಿದ್ದರೆ ಆ ಶಾಸಕರಿಗೆ ಕಾನೂನಾತ್ಮಕವಾಗಿ ಎದುರಾಗುವ ಸಮಸ್ಯೆಗೆ ರಕ್ಷಣೆ ಇರುತ್ತದೆಯೇ ಎಂದು ಕೇಳಿದಾಗ, “ಸಮಯ ಬರಲಿ, ಮಾತನಾಡೋಣ. ಈಗಲೇ ಎಲ್ಲವೂ ಬೇಡ. ಅಡ್ಡಮತದಾನದ ಬಗ್ಗೆ ಸ್ಪೀಕರ್ ಗೆ ದೂರಿನ ವಿಚಾರವೂ ನನಗೆ ಗೊತ್ತಿಲ್ಲ. ಸೋಮಶೇಖರ್ ಅವರು ಅವರ ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕಿದ್ದಾರೆ. ಈ ಚುನಾವಣೆ ಮೈತಿ ಸರಿಯೋ? ಸರಿಯಲ್ಲವೋ? ಎಂಬ ವಿಚಾರಕ್ಕೆ ಸಂಬಂಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಮತದಾರರು, ಶಾಸಕರು, ಪದವೀಧರರು, ಶಿಕ್ಷಕರು ಒಪ್ಪಬೇಕು. ಶಿಕ್ಷಕರು ಈಗಾಗಲೇ ತಿರಸ್ಕರಿಸಿದ್ದು, ಶಾಸಕರು ಯಾವ ನಿರ್ಧಾರ ತೆಗೆದುಕೊಂಡಿದ್ದಾರೆ ನೋಡೋಣ” ಎಂದರು.

ಸೋಲು ಗೆಲುವು ಮುಖ್ಯವಲ್ಲ, ನಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸಂಖ್ಯಾಬಲ ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೆ ಏನಾಗುತ್ತಿತ್ತು ಅಂತಾ ನಮಗೆ ಗೊತ್ತಿದೆ. ನಾವಾಗಿರುವುದಕ್ಕೆ ಸುಮ್ಮನೆ ಇದ್ದೇವೆ. ಈ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ” ಎಂದು ತಿಳಿಸಿದರು.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ