ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಕಿಲ್ಲರ್ ಕೊರೊನ ವಿರುದ್ಧ ಹೋರಾಡಲು ಜಾಗೃತಿ ಮತ್ತು ಎಚ್ಚರಿಕೆ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ ಕೆಲವು ತಿಂಗಳಿನಿಂದ ಇಡೀ ದೇಶ ಹೋರಾಡಿದ ರೀತಿ ಮತ್ತು ಆತಂಕಗಳನ್ನ ಸುಳ್ಳೆಂದು ಸಾಬೀತು ಮಾಡಿದೆ.
ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಗುಣಮುಖರಾದ ಸೋಂಕಿತರ ಸಂಖ್ಯೆ ಚೆನ್ನಾಗಿದೆ. ಜೀವ ಕಳೆದುಕೊಂಡ ಪ್ರತಿಯೊಬ್ಬನ ಬಗ್ಗೆ ಬೇಸರ ಮೂಡುತ್ತದೆ. ಆದರೂ ಲಕ್ಷಾಂತರ ಮಂದಿಯ ಜೀವ ಉಳಿಸುವಲ್ಲಿ ದೇಶ ಯಶಸ್ವಿಯಾಗಿದೆ ಎಂದಿದ್ದಾರೆ.
ಕೆಲವು ಪ್ರದೇಶಗಳಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ ಅಂಥ ಸ್ಥಳಗಳಲ್ಲಿ ಎಚ್ಚರಿಕೆ ಅಗತ್ಯವಿದೆ.ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದು ಮತ್ತೆ ನೆನಪಿಸಿದರು.
ಜಮ್ಮುವಿನ ಟ್ರೆವಾ ಸರಪಂಚ ಬಲ್ಬೀರ್ ಕೌರ್ ತಮ್ಮ ಪಂಚಾಯಿತಿಯಲ್ಲಿ 30 ಹಾಸಿಗೆಗಳ ಕ್ವಾರಂಟೈನ್ ಬೆಡ್ಗಳನ್ನ ನಿರ್ಮಿಸಿದ್ದರ ಬಗ್ಗೆ ಪ್ರಧಾನಿ ಮೋದಿ ನೆನದರು.
ಇನ್ನು ಜಮ್ಮು ಕಾಶ್ಮೀರದ ಅನಂತ್ನಾಗ್ನ ಪುರಸಭೆ ಅಧ್ಯಕ್ಷ ಮೊಹ್ಮದ್ ಇಕ್ಬಾಲ್ 50 ಸಾವಿರ ರೂ. ವೆಚ್ಚದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಯಂತ್ರವನ್ನ ತಯಾರಿ ಮಾಡಿರುವ ಸ್ಪೂರ್ತಿದಾಯಕ ಕತೆಗಳಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?