Featured
ಪಿಎಂ ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ – ಪ್ರಧಾನಿಯಿಂದ ಕೃಷಿ ಮೂಲ ಸೌಕರ್ಯ ನಿಧಿ ಉದ್ಘಾಟನೆ
![](https://risingkannada.com/wp-content/uploads/2020/08/MODI-GOVT.jpg)
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
![Puradamma](https://risingkannada.com/wp-content/uploads/2020/08/Puradamma.jpg)
ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ 8.5 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆಯಡಿ 17 ಸಾವಿರ ಕೋಟಿ ರೂಪಾಯಿಯನ್ನ ವರ್ಗಾಯಿಸಿದರು. 2018ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯ 6ನೇ ಕಂತಿನ ಭಾಗವನ್ನು ಪ್ರಧಾನಿ ದೇಶದ ರೈತರ ಖಾತೆಗಳಿಗೆ ವರ್ಗಾಯಿಸಿದ್ದಾರೆ.
2018ರ ಡಿಸೆಂಬರ್ನಲ್ಲಿ ಆರಂಭವಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ 9 ಕೋಟಿ ರೈತರಿಗೆ ಆರ್ಥಿಕ ಸಹಾಯವನ್ನು ಮಾಡುವ ಉದ್ದೇಶದಿಂದ 75 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ನೇರವಾಗಿ ವರ್ಗಾಯಿಸುವುದಾಗಿದೆ.
ನಿಜವಾದ ರೈತ ಫಲಾನುಭವಿಗಳಿಗೆ ಸರ್ಕಾರದ ಈ ನಗದು ಲಾಭ ಸಿಗಲು ಮತ್ತು ಯಾವುದೇ ರೀತಿಯಲ್ಲಿ ಸೋರಿಕೆ ತಡೆಗಟ್ಟಲು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿರುವ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಕೋವಿಡ್-19 ಸಾಂಕ್ರಾಮಿಕದ ಈ ಸಮಯದಲ್ಲಿ ಯೋಜನೆಯು ರೈತರಿಗೆ ಸಹಕಾರಿಯಾಗಲಿದೆ.
ಕೃಷಿ ಮೂಲಸೌಕರ್ಯ ನಿಧಿ ಉದ್ಘಾಟನೆ: ಇನ್ನು ಕೃಷಿ ಪೂರಕವಾದ ಉದ್ಯಮಿಗಳು, ಸ್ಟಾರ್ಟ್ ಅಪ್ ಗಳು, ಕೃಷಿ ತಂತ್ರಜ್ಞಾನ ಆಧಾರಿತ ಉದ್ಯಮಿಗಳು, ರೈತರಿಗೆ ಸಹಾಯವಾಗಲು ಪ್ರಧಾನ ಮಂತ್ರಿ ಇಂದು 1 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಮತ್ತು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ.
ಇದರಡಿ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಹಲವು ಸಂಸ್ಥೆಗಳ ಮೂಲಕ ಸಾಲವಾಗಿ ಪ್ರಾಥಮಿಕ ಕೃಷಿ-ಕ್ರೆಡಿಟ್ ಸೊಸೈಟಿಗಳು, ರೈತ ಗುಂಪುಗಳು, ರೈತ ಉತ್ಪನ್ನ ಸಂಘಗಳು, ಕೃಷಿ ಉದ್ಯಮಿಗಳು, ಸ್ಟಾರ್ಟ್ ಅಪ್ ಗಳು, ಕೃಷಿ-ತಾಂತ್ರಿಕ ಸಂಸ್ಥೆಗಳಿಗೆ ನೀಡಲಾಗುತ್ತದೆ. ಇದಕ್ಕಾಗಿ ಈಗಾಗಲೇ 11 ಸಾರ್ವಜನಿಕ ವಲಯ ಬ್ಯಾಂಕ್ ಗಳು ಕೃಷಿ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡಿವೆ.
![Puradamma](https://risingkannada.com/wp-content/uploads/2020/08/Puradamma.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?