Connect with us

ರಾಜಕೀಯ

ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ: 112 ಎನ್ ಕೌಂಟರ್ ಮಾಡಿದ್ದ ಪಿ ಶರ್ಮಾಗೆ ಜೈಲೇ ಗತಿ!

ಮುಂಬೈ: ಭೂಗತ ಪಾತಕಿ ಚೋಟಾ ರಾಜನ್ ಸಹಚರ ರಾಮ್ನಾರಾಯಣ್ ಗುಪ್ತ ಎಂಬಾತನ ಮೇಲೆ 2006ರಲ್ಲಿ ಮುಂಬೈನಲ್ಲಿ ನಡೆದಿದ್ದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿ ರೇವತಿ ಮೋಹಿತೆ ಹಾಗೂ ಗೌರಿ ಗೋಡ್ಸೆ ಅವರಿದ್ದ ಹೈಕೋರ್ಟ್ ಪೀಠ 2013ರಲ್ಲಿ ಖುಲಾಸೆಗೊಳಿಸಿದ ಸಷೆನ್ಸ್ ಕೋರ್ಟ್ ತೀರ್ಪನ್ನು ಸಮರ್ಥನೀಯವಲ್ಲ ಎಂದು ರದ್ದುಗೊಳಿಸಿತು. ವಿಚಾರಣಾ ನ್ಯಾಯಾಲಯ ಶರ್ಮಾ ವಿರುದ್ಧ ಲಭ್ಯವಿದ್ದ ಸಾಕ್ಷ್ಯಾಧಾರವನ್ನು ಕಡೆಗಣಿಸಿದೆ. ಸಾಮಾನ್ಯ ಅಂಶವು ಕೂಡ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತುಪಡಿಸುತ್ತದೆ ಎಂದು ಹೈಕೋರ್ಟ್ ಹೇಳಿತು.

ಸಂಬಂಧಿಸಿದ ಸಷೆನ್ಸ್ ನ್ಯಾಯಾಲಯದ ಮುಂದೆ ಮೂರು ವಾರಗಳೊಳಗೆ ಶರಣಾಗಬೇಕೆಂದು ವಿಭಾಗೀಯ ಪೀಠ ಶರ್ಮಾಗೆ ನಿರ್ದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸೇರಿದಂತೆ 13 ಮಂದಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಿತು. ಹಾಗೆಯೆ ಇತರ ಆರು ಮಂದಿಯ ಜೀವಾವಧಿ ಶಿಕ್ಷೆಯನ್ನು ಖುಲಾಸೆಗೊಳಿಸಿತು. ಹತ್ಯೆಯಲ್ಲಿ 13 ಪೊಲೀಸರು ಸೇರಿದಂತೆ 22 ಮಂದಿ ಭಾಗಿಯಾಗಿದ್ದರು.

ಪ್ರದೀಪ್ ಶರ್ಮಾ ವಿರುದ್ಧ ಸಾಕಷ್ಟು ಸಾಕ್ಯ್ಷಾಧಾರವಿಲ್ಲವೆಂದು 2013ರಲ್ಲಿ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿ, ಇತರ 21 ಮಂದಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇಬ್ಬರು ಆರೋಪಿಗಳು ಕಸ್ಟಡಿಯಲ್ಲೆ ಮೃತಪಟ್ಟಿದ್ದರು. ಸೆಷನ್ಸ್ ಕೋರ್ಟ್ ತೀರ್ಪಿನ ವಿರುದ್ಧ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರೋಪಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅಲ್ಲದೆ ನಕಲಿ ಎನ್ಕೌಂಟರ್ನಲ್ಲಿ ಮೃತಪಟ್ಟ ರಾಮ್ ನಾರಾಯಣ್ ಗುಪ್ತ ಸಹೋದರ ಕೂಡ ಪ್ರದೀಪ್ ಶರ್ಮಾ ಖುಲಾಸೆಗೊಳಿಸಿರುವುದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.

Advertisement

2006ರ ನವೆಂಬರ್ 11 ರಂದು ಗುಪ್ತ ಅಲಿಯಾಸ್ ಲಕನ್ ಬಯ್ಯ ಎಂಬಾತನನ್ನು ಚೋಟಾ ರಾಜನ್ ಗ್ಯಾಂಗ್ ಸಹಚರ ಎಂಬ ಸಂಶಯದ ಮೇಲೆ ಮುಂಬೈನ ಪ್ರದೇಶವೊಂದರಿಂದ ಕರೆದುಕೊಂಡು ಹೋಗಲಾಗಿತ್ತು. ಸಂಜೆಯ ವೇಳೆಗೆ ಈತನನ್ನು ನಕಲಿ ಎನ್ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು. ಇದೇ ಕೇಸಿನಡಿ 25 ವರ್ಷಗಳ ಪೊಲೀಸ್ ಸೇವೆಯಲ್ಲಿ ಸುಮಾರು 112 ಮಂದಿಯನ್ನ ಎನ್ ಕೌಂಟರ್ ಮೂಲಕ ಕೊಂದ ಪ್ರದೀಪ್ ಶರ್ಮಾಗೆ ಇದೀಗ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ