Featured
ರಾಜಸ್ಥಾನದಲ್ಲೂ ರಾಜಕೀಯ ಅರಾಜಕತೆ: ಬೀದಿಗೆ ಬಂತು ಸಿಎಂ ಗೆಹ್ಲೋಟ್, ಸಚಿನ್ ಪೈಲೆಟ್ ಗುದ್ದಾಟ

ರೈಸಿಂಗ್ ಕನ್ನಡ :
ರಾಜಸ್ಥಾನ :
ರಾಜಸ್ಥಾನದಲ್ಲೂ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು ಕಾಂಗ್ರೆಸ್ಗೆ ಮತ್ತೊಂದು ವಿಘ್ನ ಎದುರಾಗಿದೆ. ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಡಿಸಿಎಂ ಸಚಿನ್ ಪೈಲೆಟ್ ನಡುವಿನ ವೈಮನಸ್ಸು ಬೀದಿಗೆ ಬಂದಿದೆ.
ಇಬ್ಬರ ನಾಯಕರುಗಳ ಜಗಳದಿಂದಾಗಿ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.ಕೆಲವು ಸಚಿವರು ಮತ್ತು ಶಾಸಕರು ಸಿಎಂ ಅಶೋಕ್ ಗೆಹ್ಲೋಟ್ಗೆ ಬೆಂಬಲ ಕೊಟ್ಟರೆ ಇತ್ತ ಡಿಸಿಎಮ್ ಸಚಿನ್ ಪೈಲೆಟ್ ತಮ್ಮ ಬೆಂಬಲಿಗರನ್ನ ಕಟ್ಟಿಕೊಂಡು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರೆಳಿದ್ದಾರೆ.

ಇತ್ತಿಚೆಗಷ್ಟೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ ಮತ್ತು ಪಕ್ಷೇತರ ಶಾಸಕರಿಗೆ ಹಣದ ಆಮಿಷವೊಡ್ಡಿ ಸರ್ಕಾರವನ್ನ ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದರು.ಇದೀಗ ಈ ಹೇಳಿಕೆ ನೀಡಿದ ಬೆನ್ನಲ್ಲೆ ರಾಜಸ್ಥಾನದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ.ಆದರೆ ಈ ಆರೋಪವನ್ನ ಬಿಜೆಪಿ ನಿರಾಕರಿಸಿದ್ದು ಅಶೋಕ್ ಗೆಹ್ಲೋಟ್ಮತ್ತು ಸಚಿನ್ ಪೈಲೆಟ್ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಶಾಸಕರ ಸಭೆ ಕರೆದಿದ್ದು ಬಂದಿರುವ ಸಂಕಷ್ಟವನ್ನ ಹೇಗೆ ಪರಿಹರಿಸಿ ಕುರ್ಚಿ ಉಳಿಸಿಕೊಳ್ಳುತ್ತಾರೆ ಅನ್ನೊದನ್ನ ಕಾದು ನೋಡಬೇಕಿದೆ. ಇತ್ತಿಚೆಗೆ ಮಧ್ಯಪ್ರದೇಶದಲ್ಲೂ ಇತಂದ್ದೆ ಸಮಸ್ಯೆ ಉಂಟಾಗಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?