ರಾಜಕೀಯ
ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರಿಂದ ಪ್ರತಿಭಟನೆ ಧರಣಿ
ಹುಬ್ಬಳ್ಳಿ: ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಸಹಾಯಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರು ಪ್ರತಿಭಟನಾ ಧರಣಿ ನಡೆಸಿದರು.
ನಗರದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ನಿವೃತ್ತಿ ನೌಕರರ ಮತ್ತು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಹಿರಿಯ ನಾಗರಿಕರು, ಮೌನವಾಗಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಹಿರಿಯ ನಾಗರಿಕರು ಕಾನೂನು ಬದ್ದವಾಗಿ ರಾಷ್ಟ್ರದ ಸಂಪತ್ತು ಎಂದು ಘೋಷಣೆ ಮಾಡಬೇಕು, ಆರ್ಥಿಕವಾಗಿ ದುರ್ಬಲರಾದ ಇಪಿಎಫ್ ನಿವೃತ್ತ ನೌಕರರು, ಕಾರ್ಮಿಕ ಕೂಲಿಕಾರರು ಹಾಗೂ ವೃದ್ದಾಪಿವೇತನ ಪಡೆಯುತ್ತಿರುವ ಮುಂತಾದವರಿಗೆ ಪ್ರತಿ ತಿಂಗಳು ಹತ್ತು ಸಾವಿರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದರು.
ಮುಂದುವರೆದು ಎಲ್ಲ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ವೆಚ್ಚ, ಇನ್ಸೂರೆನ್ಸ್ ಸೌಲಭ್ಯ, ರಾಷ್ಟ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ (ಮಂತ್ರಾಲಯ) ಇಲಾಖೆ ಸ್ಥಾಪನೆ ಮಾಡುವುದು, ಎಲ್ಲ ಪೋಲಿಸ್ ಪೋಲಿಸ್ ಠಾಣೆಯಲ್ಲಿ ಹಿರಿಯ ನಾಗರಿಕರ ಸಮಿತಿ ರಚಿಸಿ ಹಿರಿಯ ನಾಗರಿಕರ ಮೇಲಾಗುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಹಶಿಲ್ದಾರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?