Featured
ಅಕ್ಕಮಹಾದೇವಿ ವಿವಿಗೆ ಮೊಹರೆ ಹೆಸರು: ಹಣಮಂತರಾಯ ಸಂಸ್ಮರಣೆ ವೇದಿಕೆಯಿಂದ ಪ್ರತಿಭಟನೆ

ವಿಜಯಪುರ:
ರೈಸಿಂಗ್ ಕನ್ನಡ :
ಪತ್ರಿಕಾರಂಗದ ಭೀಷ್ಮ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಗ್ರಂಥಾಲಯ, ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ಮೊಹರೆ ಅವರ ಹೆಸರು ನಾಮಕರಣ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದಲ್ಲಿ ಮೊಹರೆ ಹಣಮಂತರಾಯ ಸಂಸ್ಮರಣೆ ವೇದಿಕೆ ವತಿಯಿಂದ ಮೆರವಣಿಗೆ ನಡೆಸಲಾಯಿತು. ಮೂಲತಃ ದೇವರಹಿಪ್ಪರಗಿಯವರಾದ ಮೊಹರೆ ಹಣಮಂತರಾಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ 6 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು. ತಮ್ಮ ಅಪ್ರತಿಮ ಲೇಖನಗಳ ಮೂಲಕ ಯುವಕರಲ್ಲಿ ದೇಶಾಭಿಮಾನ ಮೂಡುವಂತೆ ಮಾಡಿದ್ದರು.
ದೇವರಹಿಪ್ಪರಗಿ ಪಟ್ಟಣದಲ್ಲಿ ಅವರ ಪ್ರತಿಮೆ ಸೇರಿದಂತೆ ಮೊಹರೆ ಹಣಮಂತರಾಯ ಹೆಸರಿನಲ್ಲಿ ಕೊಡುವ ಪ್ರಶಸ್ತಿ ಕಾರ್ಯಕ್ರಮವನ್ನು ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆಸವಂತೆ ಮನವಿ ಸಲ್ಲಿಸಲಾಯಿತು.
ದೇವರ ಹಿಪ್ಪರಗಿ ಪಟ್ಟಣದ ಮೊಹರೆ ಹನುಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೂ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮೊಹರೆ ಹಣಮಂತರಾಯರ ಅಭಿಮಾನಿಗಳು ಭಾಗವಹಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?