ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ನಕಲಿ ಮದ್ಯ ದುರಂತಕ್ಕೆ ಪಂಜಾಬ್ನಲ್ಲಿ ಮೃತಪಟ್ಟವರ ಸಂಖ್ಯೆ 86ಕ್ಕೆ ಏರಿದೆ. ಘಟನೆ ಸಂಬಂಧ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮೃತರ ಕುಟುಂಬಗಳಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಆರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.
ಕಳೆದ ಬುಧವಾರ ರಾತ್ರಿಯಿಂದ ಪಂಜಾಬ್ನ ಕೆಲ ಜಿಲ್ಲೆಗಳಲ್ಲಿ ದಿಢೀರೆಂದು ಸರಣಿ ಸಾವು ಸಂಭವಿಸಲು ಶುರುವಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಈ ಎಲ್ಲಾ ಸಾವಿಗೂ ಕಾರಣ ಎಂದು ತಿಳಿದುಬಂದಿತ್ತು. ಅದರಲ್ಲೂ ಪಂಜಾಬಿನ ತರ್ಣ್ ತರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ 63 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಅಮೃತಸರದಲ್ಲಿ 12 ಹಾಗೂ ಬಟಾಲಾದಲ್ಲಿ 11 ಜನ ಮೃತಪಟ್ಟಿದ್ದಾರೆ.
ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಶಾಮೀಲಾದವರ ಬಂಧನಕ್ಕೆ ಮುಂದಾಗಿದೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳನ್ನೂ ಅಮಾನತುಗೊಳಿಸಿದೆ. ಈ ಸಂಬಂಧ ಅಧಿಕೃತ ಹೇಳಿಕೆ ಹೊರಡಿಸಿರುವ ಪಂಜಾಬ್ ಸರ್ಕಾರ, ಪ್ರಕರಣ ಸಂಬಂದ 7 ಅಬಕಾರಿ ಹಾಗೂ 6 ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ನಕಲಿ ಮದ್ಯ ಮಾರಾಟ ಮಾಡಲಾದ ಅಮೃತಸರ, ಗುರುದಾಸಪುರ ಹಾಗೂ ತರ್ಣ್ ತರಣ್ ಜಿಲ್ಲೆಗಳಲ್ಲಿ ನಿನ್ನೆಯಿಂದ ನೂರಕ್ಕೂ ಹೆಚ್ಚು ದಾಳಿ ನಡೆಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಮಾಫಿಯಾ ಮಾಸ್ಟರ್ ಮೈಂಡ್, ಮಹಿಳಾ ಕಿಂಗ್ಪಿನ್ಗಳು ಸಾರಿಗೆ ಮಾಲೀಕರು, ವಾಂಟೆಡ್ ಕ್ರಿಮಿನಲ್ಗಳು ಮತ್ತು ವಿವಿಧ ಢಾಬಾಗಳ ಮಾಲೀಕರು ಮತ್ತು ವ್ಯವಸ್ಥಾಪಕರು ಸೇರಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?