Connect with us

Featured

ಜಗತ್ತಿನ ಕತ್ತಲು ಕಳೆಯಲಿ, ಕೊರೊನಾ ಸಂಕಷ್ಟ ದೂರವಾಗಲಿ : ಶ್ರೀ ರಾಘವೇಶ್ವರ ಶ್ರೀ..!

ರೈಸಿಂಗ್​ ಕನ್ನಡ :

ಗೋಕರ್ಣ :

ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ 27ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಪೂಜ್ಯರು ಆಶೀರ್ವಚನ ನೀಡಿದರು.

Advertisement

ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮೆ. ಶಾರ್ವರಿ ಎಂದರೆ ಕತ್ತಲು, ಪೂರ್ಣಿಮೆ ಎಂದರೆ ಬೆಳಕು. ಕತ್ತಲೆಯ ಮಧ್ಯೆ ಬೆಳಗುವಂತಹ ಬೆಳಕು. ಸೂರ್ಯನ ಬೆಳಕಿನ ತಾಪ, ಧಗೆಯನ್ನು ಉಂಟು ಮಾಡುತ್ತದೆ. ಆದರೆ ಪೂರ್ಣಮಿಯ ಬೆಳಕು ತಂಪು ನೀಡುತ್ತದೆ. ಶಾರ್ವರಿ ಗುರುಪೂರ್ಣಿಮೆ ಎಂದರೆ ಗುರು ತಂದ ಬೆಳಕಾಗಿದೆ ಎಂದರು.

ಭಾರತದಲ್ಲಿ ಉಂಟಾದ ಜ್ಞಾನ ಪ್ರಕಾಶ ಪ್ರಪಂಚದಲ್ಲೆಲ್ಲೂ ಆಗಿಲ್ಲ. ಇಂತಹ ದೊಡ್ಡ ಜ್ಞಾನಧನದ ವಾರಸುದಾರರು ನಾವಾಗಿದ್ದು, ಎಲ್ಲವನ್ನೂ ಇವತ್ತು ಕಳೆದುಕೊಂಡಿದ್ದೇವೆ. ದೇಶ ಜ್ಞಾನವನ್ನೆಲ್ಲಾ ಕಳೆದುಕೊಂಡ ಕಾರಣ ಕತ್ತಲು ದೇಶಕ್ಕೆ ಆವರಿಸಿದೆ. ಈ ಕತ್ತಲೆಯನ್ನು ನಿವಾರಿಸಲು ಗುರುಪೂರ್ಣಿಮೆಯೇ ಬೇಕಾಗಿದೆ ಎಂದು ಹೇಳಿದರು.

ಒಂದು ವಿದ್ಯಾ ಪೀಠ ಬೇಕಾಗಿದೆ. ಈ ಚಾತುರ್ಮಾಸ್ಯದ ಉದ್ದೇಶವೇ ವಿದ್ಯೆ. ವಿದ್ಯೆ ಉಳಿಯಬೇಕು, ವಿದ್ಯೆ ಬೆಳೆಯಬೇಕು, ವಿದ್ಯೆ ಬೆಳಗಬೇಕು, ಮತ್ತೊಮ್ಮೆ ವಿದ್ಯೆಯ ಪುನಪ್ರತಿಷ್ಠಾಪನೆ ಆಗಬೇಕಾಗಿದೆ ಎಂಬ ಕಾರಣಕ್ಕೆ ಒಂದು ವಿಶ್ವ ವಿದ್ಯಾ ಪೀಠ, ಐದು ಗುರುಕುಲಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈಮೂಲಕ ದೇಶದ ಕತ್ತಲನ್ನು ದೂರ ಮಾಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

ವ್ಯಾಧಿ ತಂದ ಕಷ್ಟ, ವ್ಯಾಧಿ ತಂದ ನಷ್ಟ, ಯುದ್ಧ ಭೀತಿ ಈ ಮುಬ್ಬಗೆಯ ಕಷ್ಟದಲ್ಲಿ ಕತ್ತಲೆಯಲ್ಲಿ ದೇಶ ಇರುವ ಹೊತ್ತು. ದೇಶಕ್ಕೆ ಬಂದ ಕತ್ತಲೆ ನಿವಾರಣೆಯಾಗಲಿ, ದೇಶ ಬೆಳಕಾಗಲಿ, ದೇಶಕ್ಕೆ ಒಳಿತಾಗಲಿ ಎಂದು ಶಂಕರಾಚಾರ್ಯ ಪರಂಪರೆಯ ಪೀಠ ಹಾರೈಸುತ್ತದೆ ಎಂದರು.

ಶನಿವಾರ ಸಾಯಂಕಾಲ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಭಾನುವಾರ ಬೆಳಗ್ಗೆ ಶ್ರೀಕರಾರ್ಚಿತ ಪೂಜೆ, ವ್ಯಾಸಪೂಜೆ, ಭಿಕ್ಷಾ ಸೇವೆ ನಡೆಯಿತು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ