Connect with us

Featured

ಗೋವಧೆ ನಿಷೇಧ, ತಳಿ ಸಂವರ್ಧನೆಗೆ ಕಾಯ್ದೆ, ಜಿಲ್ಲೆಗೊಂದು ಗೋಸ್ವರ್ಗ: ರಾಘವೇಶ್ವರ ಶ್ರೀ ಒತ್ತಾಯ

ರೈಸಿಂಗ್​ ಕನ್ನಡ:

ಗೋಕರ್ಣ:

 ರಾಜ್ಯದಲ್ಲಿ ಸಂಪೂರ್ಣ ಗೋವಧೆ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆಯನ್ನು ಸೋಮವಾರ (ಸೆ. 21)ಯಿಂದ ಆರಂಭವಾಗುವ ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಆಂಗೀಕರಿಸಬೇಕು ಎಂದು ರಾಮಚಂದ್ರಾಪುರಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾ ಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶ್ರೀರಾಮಚಂದ್ರಾಪುರ ಮಠದಿಂದ ಚಾಲಿತವಾದ ಭಾರತೀಯ ಗೋಪರಿವಾರ ವತಿಯಿಂದ ಈಗಾಗಲೇ ಅಭಯಾಕ್ಷರ ಅಭಿಯಾನದಡಿ ಒಂದು ಕೋಟಿಗೂ ಅಧಿಕ ಮಂದಿಯ ಪ್ರತ್ಯೇಕ ಹಕ್ಕೊತ್ತಾಯ ಪತ್ರಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ದೇಶದ ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗಿದೆ. ಬಹುಜನರ ಅಭಿಪ್ರಾಯಕ್ಕೆ ಮನ್ನಣೆ ನೀಡುವುದು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳ ಕರ್ತವ್ಯ.

ಅಭಯಾಕ್ಷರ ಅಭಿಯಾನದಡಿ ಪಕ್ಷಭೇದ, ಧರ್ಮಭೇದ ಮರೆತು ನಾಡಿನ ವಿವಿಧ ಮಠಾಧೀಶರು, ಧರ್ಮಗುರುಗಳು, ಸೆಲೆಬ್ರಿಟಿಗಳು, ಶಿಕ್ಷಣ ತಜ್ಞರು ಸೇರಿದಂತೆ ಸಮಾಜದ ಎಲ್ಲ ಸ್ತರಗಳ ಗಣ್ಯರು ಹಕ್ಕೊತ್ತಾಯ ಮಂಡಿಸಿದ್ದು, ಸರ್ಕಾರ ಇನ್ನು ವಿಳಂಬ ಮಾಡದೇ ಪ್ರಸಕ್ತ ಅಧಿವೇಶನದಲ್ಲೇ ಗೋಹತ್ಯೆ ನಿಷೇಧದ ಮಸೂದೆ ಆಂಗೀಕರಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

ಗೋವು ಇಲ್ಲದ ಬದುಕನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಆದ್ದರಿಂದ ಗೋವಿನ ವಿಚಾರದಲ್ಲಿ ರಾಜಕೀಯ ಮಾಡದೇ ಎಲ್ಲ ಪಕ್ಷಗಳು ಈ ಮಸೂದೆಯನ್ನು ಬೆಂಬಲಿಸಿ ಸರ್ವಾನುಮತದಿಂದ ಆಂಗೀಕರಿಸಿ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಸಲಹೆ ಮಾಡಿದ್ದಾರೆ.

ಕೊರೊನಾ ಸಂಕಷ್ಟದ ಪ್ರಸಕ್ತ ಸಂದರ್ಭದಲ್ಲಿ ಗೋವು ಮತ್ತು ಗೋ ಆಧರಿತ ಕೃಷಿ ಗ್ರಾಮೀಣ ಜನತೆಗೆ ವರದಾನವಾಗಬಲ್ಲದು. ಕೇವಲ ಹಾಲಿಗಾಗಿ ಗೋವು ಎಂಬ ಮನೋಭಾವ ಬದಲಾಗಿ ಗೋಮೂತ್ರ- ಗೋಮಯ ಸದ್ಬಳಕೆ ಮೂಲಕ ಗೋ ಸಾಕಾಣಿಕೆಯನ್ನು ಲಾಭದಾಯಕ ಎನ್ನುವುದನ್ನು ರೈತರಿಗೆ ಮನದಟ್ಟು ಮಾಡುವ ಕಾರ್ಯ ಆಗಬೇಕು. ಇದಕ್ಕೆ ಪೂರಕವಾಗಿ ಗೋಮೂತ್ರ, ಗೋಮಯ ಮೌಲ್ಯವರ್ಧನೆಗೆ ಸರ್ಕಾರ ಒತ್ತು ನೀಡಿದಲ್ಲಿ ಗ್ರಾಮೀಣ ಆರ್ಥಿಕ ಪುನಃಶ್ಚೇತನಕ್ಕೆ ಒತ್ತು ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಾರಸುದಾರರಿಲ್ಲದ ಗೋವುಗಳು ರಾಜ್ಯಾದ್ಯಂತ ಎಲ್ಲ ನಗರ- ಪಟ್ಟಣಗಳಲ್ಲಿ ದೊಡ್ಡ ಸಮಸ್ಯೆಯಾಗಿದ್ದು, ಈ ಪೈಕಿ ಬಹಳಷ್ಟು ಗೋವುಗಳು ಕಟುಕರ ಪಾಲಾಗುತ್ತಿವೆ. ಇದನ್ನು ತಪ್ಪಿಸಲು ಮತ್ತು ಆರಂಭದಿಂದಲೂ ಸ್ವಚ್ಛಂದವಾಗಿ ವಿಹರಿಸುತ್ತಾ ಬಂದ ಇಂಥ ಗೋವುಗಳ ಸ್ವಾತಂತ್ರ್ಯವನ್ನು ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಗೋಸ್ವರ್ಗ ನಿರ್ಮಿಸಬೇಕು. ಈಗಾಗಲೇ ಉತ್ತರಕನ್ನಡದ ಸಿದ್ದಾಪುರದ ಬಳಿ ಸಾವಿರಕ್ಕೂ ಹೆಚ್ಚು ಗೋವುಗಳ ಗೋಸ್ವರ್ಗವನ್ನು ನಿರ್ಮಿಸಿ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರುತ್ತಿರುವ ಶ್ರೀಮಠ ಇದಕ್ಕೆ ಅಗತ್ಯ ತಾಂತ್ರಿಕ ನೆರವು ನೀಡಲು ಸಿದ್ಧವಿದೆ ಎಂದು ವಿವರಿಸಿದ್ದಾರೆ.

ಗವ್ಯೋತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಆಳವಾದ ಸಂಶೋಧನೆಗೆ ಒತ್ತು ನೀಡಬೇಕು ಮತ್ತು ಗವ್ಯೋತ್ಪನ್ನಗಳನ್ನು ಜನಪ್ರಿಯಗೊಳಿಸಲು ಅಗತ್ಯ ಕಾರ್ಯಯೋಜನೆ ರೂಪಿಸಬೇಕು. ಇದಕ್ಕಾಗಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಸರ್ಕಾರವೇ ಗವ್ಯೋತ್ಪನ್ನ ಮಾರಾಟ ಘಟಕಗಳನ್ನು ಸ್ಥಾಪಿಸಬೇಕು ಎಂದು ಹೇಳಿದ್ದಾರೆ.

ಗವ್ಯೋತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಒತ್ತು ನೀಡಿದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಹೆಚ್ಚಿ, ಜನ ವಲಸೆ ಹೋಗುವುದು ತಪ್ಪುತ್ತದೆ. ಭಾರತೀಯ ಗೋತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಪೂರಕವಾಗಿ ಸರ್ಕಾರ ಹಾಲು ಸಂಗ್ರಹ ಕೇಂದ್ರಗಳಲ್ಲಿ ನಿಗದಿತ ದರಕ್ಕೆ ಗೋಮೂತ್ರ ಹಾಗೂ ಗೋಮಯ ಖರೀದಿಗೆ ವ್ಯವಸ್ಥೆ ಮಾಡಬೇಕು.

ಛತ್ತೀಸ್‍ಗಢ ಸರ್ಕಾರ ಆರಂಭಿಸಿದ ಈ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಎಲ್ಲ ತಾಲೂಕುಗಳಲ್ಲಿ ಗವ್ಯೋತ್ಪನ್ನ ಘಟಕಗಳನ್ನು ಸ್ಥಾಪಿಸಿ, ಹೀಗೆ ಖರೀದಿಸಿದ ಗೋಮೂತ್ರ, ಗೋಮಯದ ಸಮರ್ಪಕ ಬಳಕೆಗೆ ಕಾರ್ಯಯೋಜನೆ ರೂಪಿಸಬೇಕು. ಉತ್ತರ ಪ್ರದೇಶ ಹಾಗೂ ಇತರ ಹಲವು ರಾಜ್ಯಗಳು ರಚಿಸಿರುವ ಗೋಸೇವಾ ಆಯೋಗಗಳು ಗೋಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇದು ಕರ್ನಾಟಕಕ್ಕೂ ಮಾದರಿಯಾಗಬೇಕು ಎಂದು ಸಲಹೆ ಮಾಡಿದ್ದಾರೆ.

Advertisement

ಗೋಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ನಾಡಿನ ಹಲವು ಮಠಮಾನ್ಯಗಳ ಮಠಾಧೀಶರು, ವಿಶ್ವ ಹಿಂದೂ ಪರಿಷತ್‍ನಂಥ ಸಂಘಟನೆಗಳು ಕೂಡಾ ಸಂಪೂರ್ಣ ಗೋವಧೆ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಸಂಪೂರ್ಣ ಗೋವಧೆ ನಿಷೇಧ ಇಡೀ ಸಮಾಜದ ಒಕ್ಕೊರಲ ಹಕ್ಕೊತ್ತಾಯ. ಇದನ್ನು ಸರ್ಕಾರ ಮಾನ್ಯ ಮಾಡಲೇಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ