Featured
ರಾಜ್ಯದ್ಯಾಂತ ಭಾರೀ ಮಳೆ, ಪ್ರವಾಹ : ರಾಜ್ಯದ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ರೈಸಿಂಗ್ ಕನ್ನಡ :
ಬೆಂಗಳೂರು :
ಕಳೆದ ಕೆಲವು ದಿನಗಳಿಂದ ರಾಜ್ಯದ ಮಲೆನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ, ಉತ್ತರ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.13ರ ವರೆಗೂ ಮಳೆ ಆರ್ಭಟ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಲಿದ್ದು ಅಂದು ಆರೆಂಜ್ ಅಲರ್ಟ್ ಹಾಗೂ ಬುಧವಾರ ಮತ್ತು ಗುರುವಾರದಂದು ಯೆಲ್ಲೋ ಅಲರ್ಟ್ ಘೋಷಿಸಿಲಾಗಿದೆ.
ಕೊಡಗಿನಲ್ಲಿ ಭಾರೀ ಮಲೆಯಾಗುತ್ತಿರುವುದರಿಂದ ಶ್ರೀರಂಗ ಪಟ್ಟಣದ ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಾಮಣದ ನೀರು ಹರಿದು ಬರುತ್ತಿದೆ. ಆಣೆಕಟ್ಟೆಯಿಂದಲೂ ನೀರನ್ನ ಬಿಡಲಾಗುತ್ತಿದೆ. ನದಿ ದಡದಲ್ಲಿರುವವರಿಗೆ ಎಚ್ಚರಿದಿಂದ ಇರಿಸಲಾಗಿದೆ.
ಸಾವರ್ಜನಿಕರಿಗೆ ಈ ಪ್ರಧೇಶಗಳಲ್ಲಿ ಬರದಂತೆ ನಿರ್ಬಂಧ ವಿಧಿಸಲಾಗಿದೆ.ಮಂಗಳೂರು ಮತ್ತು ಕಾರವಾದಲ್ಲಿ ಸಮುದ್ರದಲ್ಲಿ 4 ಮೀಟರ್ ಎತ್ತರದ ಅಲೆಗಳು ಕಂಡು ಬರಲಿವೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರ ನೀಡಲಾಗಿದೆ. ಮುಂದಿನ ಎರಡೂ ದಿನಗಳಲ್ಲಿ ಒಳನಾಡಲ್ಲಿ ಕಡಿಮೆ ಮಳೆ ಆಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿ ಧಾಮ, ವೆಲ್ಲಸ್ಲಿ ಸೇತುವೆ. ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖಸ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?