ರೈಸಿಂಗ್ ಕನ್ನಡ ವೆಬ್
ಬೆಂಗಳೂರು : ವಿಶ್ವವನ್ನೇ ಕಾಡುತ್ತಿರೋ ಕೊರೊನಾ ಸಂಕಷ್ಟದ ವಿರುದ್ಧ ವೈದ್ಯರು ಸಮರ ಸಾರಿದ್ದಾರೆ. ರಾಜ್ಯದಲ್ಲೂ ಮಹಾಮಾರಿ ವಿರುದ್ಧ ಹೋರಾಟ ಮುಂದುವರಿದಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಭಾರೀ ಕಟ್ಟುನಿಟ್ಟಿನ ಸ್ಕ್ರೀನಿಂಗ್ ನಡೆಯುತ್ತಿದೆ. ನಗರದ ಕೆಲ ಖಾಸಗಿ ಆಸ್ಪತ್ರೆಗಳು ಈ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೂಚನೆಯಂತೆ, ಬೆಂಗಳೂರಿನ ಪ್ರತಿಷ್ಠಿತ ರಾಜಶೇಖರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಿಬ್ಬಂದಿಗಳು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಿದ್ದಾರೆ.
ಸತತ ಒಂದು ತಿಂಗಳ ಕಾಲ 6 ಜನರ ತಂಡ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಿದೆ. ಇದೀಗ ಆ ಎಲ್ಲಾ ಸಿಬ್ಬಂದಿಗಳಿಗೂ ವಿಶ್ರಾಂತಿಗೆ ಸೂಚಿಸಲಾಗಿದೆ. ಈ ಕುರಿತು ಮಾತನಾಡಿದ ರಾಜಶೇಖರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ, ಡಾ. ರಮೇಶ್ ಸೋಮಯಾಜಿ ಸಿಬ್ಬಂದಿಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ರು. ಅಲ್ಲದೇ ಸರ್ಕಾರ ಮತ್ತು ಬಿಬಿಎಂಪಿ ಕೂಡ, ನಮ್ಮ ಆಸ್ಪತ್ರೆಯ ಕಾರ್ಯವನ್ನ ಶ್ಲಾಘಿಸಿದೆ ಎಂದು.
ಮುಂದಿನ ದಿನಗಳಲ್ಲೂ ನಮ್ಮ ಸಿಬ್ಬಂದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಲು ಸದಾ ಸಿದ್ಧರಿರುತ್ತೇವೆ ಎಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?