ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ಮತ್ತು 18 ಶಾಸಕರಿಗೆ ನೀಡಿರುವ ನೋಟೀಸ್ ವಿಚಾರದಲ್ಲಿ ರಾಜಸ್ಥಾನ ಹೈಕೋರ್ಟ್ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ರಾಜಸ್ಥಾನ ವಿಧಾನಸಭಾ ಸ್ಪೀಕರ್ ಸಿ.ಪಿ.ಜೋಶಿ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಪ್ರತಿ ದಿನ ತೀವ್ರ ಸ್ವರೂಪ ಪಡೆಯುತ್ತಿದೆ. ಸರ್ಕಾರವನ್ನ ಉಳಿಸಿಕೊಳ್ಳುವುದಕ್ಕಾಗಿ ಸಿಎಂ ಅಶೋಕ್ ಗೆಹ್ಲೋಟ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.
ಇತ್ತ ರಾಜಸ್ಥಾನ ವಿಧಾನ ಸಭೆಯ ಸ್ಪೀಕರ್ ಸಿ.ಪಿ.ಜೋಶಿ, ಬಂಡಾಯವೆದ್ದ ಸಚಿನ್ ಪೈಲೆಟ್ ಮತ್ತು ಇತರೆ ಶಾಸಕರಿಗೆ ಅನರ್ಹತೆಯ ನೋಟೀಸ್ ನೀಡಿದ್ದಾರೆ. ನೋಟೀಸ್ ವಿರುದ್ಧ ಸಚಿನ್ ಪೈಲೆಟ್ ಮತ್ತು ಇತರ ಶಾಸಕರು ಪ್ರಕರಣದಲ್ಲಿ ಮಧ್ಯ ಪ್ರವೇಶಿಸುವಂತೆ ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿರುದ್ಧ ಸ್ಪೀಕರ್ ಸಿ.ಪಿ.ಜೋಶಿ ಸುಪ್ರೀಮ್ ಮೆಟ್ಟಿಲೇರಿದ್ದಾರೆ.
ಸುಪ್ರೀಮ್ ಪತ್ರ ಬರೆದಿರುವ ಅವರು, ಈ ಪ್ರಕರಣ ರಾಜಸ್ತಾನ ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. ಸ್ಪೀಕರ್ಗೆ ರಾಜಸ್ಥಾನ ಹೈ ಕೋರ್ಟ್ ಸೂಚನೆ ನೀಡುವುದು ತಪ್ಪು. ಸಚಿನ್ ಪೈಲೆಟ್ ಮತ್ತು ಇತರೆ ಶಾಸಕರ ಬಗ್ಗೆ ಸ್ಪೀಕರ್ ನಿರ್ಧರಿಸುವವರೆಗೂ ಹೈಕೋರ್ಟ್ ವ್ಯಾಪ್ತಿಗೆ ಈ ಪ್ರಕರಣ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?