Connect with us

Featured

ಯಾವ ರಾಶಿಯವರಿಗೆ ಯಾವ ಬಣ್ಣದ ರಾಖಿ..? ಬಣ್ಣ ಬದಲಾದರೆ ಏನಾಗುತ್ತದೆ..?

ಶ್ರೀ ಗಜೇಂದ್ರ ಜೋಷಿ, ಜಾತಕ ವಿಮರ್ಷಕರು ಮತ್ತು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಆರಾಧಕರು

ಸಂಪರ್ಕಿಸಿ: 95381752775

ಶ್ರಾವಣ ಮಾಸದ ಹುಣ್ಣಿಮೆಯ ತಿಥಿ ದಿನವನ್ನು ರಕ್ಷಾ ಬಂಧನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನ ಸಹೋದರಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಸಂಪ್ರದಾಯವಿದೆ. ಹೀಗೆ ರಾಖಿ ಕಟ್ಟುವುದರ ಮೂಲಕ ಸಹೋದರ ಸುಖೀ ಜೀವನ ನಡೆಸಲಿ ಎಂದು ಹಾರೈಸುತ್ತಾ, ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸುತ್ತಾಳೆ. ಇದೇ ವೇಳೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ರಾಶಿಯವರಿಗೆ ಯಾವ ಬಣ್ಣದ ರಾಖಿ ಕಟ್ಟಿದರೆ ಒಳ್ಳೆಯದಾಗುತ್ತದೆ ಎಂಬ ಬಗ್ಗೆ ಉಲ್ಲೇಖವಿದೆ. ಅದು ಯಾವುದು ಎಂಬುದರ ಬಗ್ಗೆ ಗಮನಿಸೋಣ.

Advertisement

ಮೇಷ ರಾಶಿ

ಈ ರಾಶಿಯ ಸಹೋದರನಿದ್ದರೆ ಈ ರಾಶಿಯ ಅಧಿಪತಿ ಮಂಗಳ ಗ್ರಹವಾಗಿದ್ದು, ಇವರಿಗೆ ಕೆಂಪು ಬಣ್ಣದ ರಾಖಿ ಕಟ್ಟುವುದು ಶುಭದಾಯಕ ಎಂದು ಹೇಳಲಾಗುತ್ತದೆ. ಇವರ ಜೀವನದಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿಯಾಗುತ್ತದೆ.

ವೃಷಭ ರಾಶಿ

ಈ ರಾಶಿಯ ಅಧಿಪತಿ ಶುಕ್ರ ಗ್ರಹವಾಗಿದೆ. ಬಣ್ಣದ ರಾಖಿಯು ಈ ರಾಶಿಯ ಸಹೋದರನಿಗೆ ಸೂಕ್ತವಾಗುತ್ತದೆ. ಇದನ್ನು ಕಟ್ಟಿದರೆ ಇವರಿಗೆ ತುಂಬಾ ಉತ್ತಮ ಪರಿಣಾಮಗಳಾಗಿ ಒಳ್ಳೆಯ ದಿನಗಳನ್ನು ಕಾಣುತ್ತಾರೆ.

Advertisement

ಮಿಥುನ ರಾಶಿ

ಈ ರಾಶಿಯ ಅಧಿಪತಿ ಬುಧ ಗ್ರಹವಾಗಿದೆ. ಹಸಿರು ಬಣ್ಣದ ರಾಖಿಯನ್ನು ಇವರಿಗೆ ಕಟ್ಟುವುದು ಶುಭದಾಯಕ. ಇದರಿಂದ ಸುಖ-ಸಮೃದ್ಧಿ ಹಾಗೂ ದೀರ್ಘಾಯಸ್ಸು ಲಭಿಸುತ್ತದೆ.

Advertisement

ಕರ್ಕಾಟಕ ರಾಶಿ

ಈ ರಾಶಿಯ ಅಧಿಪತಿ ಚಂದ್ರ ಗ್ರಹವಾಗಿದೆ. ಈ ರಾಶಿಯವರಿಗೆ ಹಳದಿ ಅಥವಾ ಬಿಳಿ ಬಣ್ಣದ ರಾಖಿ ಹೊಂದಾಣಿಕೆಯಾಗುತ್ತದೆ. ಈ ಬಣ್ಣಗಳ ರಾಖಿಯನ್ನು ಕಟ್ಟಿದರೆ ಇವರಿಗೆ ಶುಭವನ್ನು ತಂದುಕೊಡುತ್ತದೆ.

ಸಿಂಹ ರಾಶಿ

ಈ ರಾಶಿಯ ಅಧಿಪತಿ ಸೂರ್ಯಗ್ರಹವಾಗಿದೆ. ಈ ರಾಶಿಯ ಸಹೋದರನಿಗೆ ಹಳದಿ ಅಥವಾ ಕೆಂಪು ಬಣ್ಣದ ರಾಖಿಯನ್ನು ಕಟ್ಟಬೇಕು. ಇದರಿಂದಾಗಿ ಇವರಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ.

ಕನ್ಯಾ ರಾಶಿ

ಈ ರಾಶಿಯ ಅಧಿಪತಿಯು ಬುಧ ಗ್ರಹವಾಗಿದೆ. ಹಸಿರು ಬಣ್ಣದ ರಾಖಿಯನ್ನು ಇವರಿಗೆ ಕಟ್ಟಬೇಕಾಗುತ್ತದೆ. ಇದರಿಂದ ಯಾವುದೇ ದೋಷಗಳಿದ್ದರೂ ನಿವಾರಣೆಯಾಗುತ್ತದೆ. ಜೊತೆಗೆ ಸಹೋದರ ಹಾಗೂ ಸಹೋದರಿ ನಡುವಿನ ಬಾಂಧವ್ಯ ಇನ್ನೂ ಗಟ್ಟಿಯಾಗುತ್ತದೆ.

Advertisement

ತುಲಾ ರಾಶಿ

ಈ ರಾಶಿಯ ಅಧಿಪತಿಯು ಶುಕ್ರ ಗ್ರಹವಾಗಿದೆ. ಈ ರಾಶಿಯವರಿಗೆ ನೀಲಿ ಇಲ್ಲವೇ ಬಿಳಿ ಬಣ್ಣದ ರಾಖಿಯನ್ನು ಕಟ್ಟುವುದರಿಂದ ಒಳ್ಳೆಯದಾಗುತ್ತದೆ.

Advertisement

ಧನು ರಾಶಿ

ಈ ರಾಶಿಯ ಅಧಿಪತಿಯು ಗುರು ಗ್ರಹವಾಗಿದೆ. ಈ ರಾಶಿಯವರಿಗೆ ಬಂಗಾರದ ಬಣ್ಣವಾಗಿರುವ ಹಳದಿ ರಾಖಿ ಕಟ್ಟುವುದು ಶ್ರೇಷ್ಠ ಎಂದು ಹೇಳಲಾಗುತ್ತದೆ. ಇದರಿಂದ ಇವರ ಮುಂದಿನ ಜೀವನವು ಸುಖಮಯವಾಗಿರುತ್ತದೆ. ಜೊತೆಗೆ ಅಂದುಕೊಂಡಿದ್ದು ನೆರವೇರುತ್ತದೆ ಎಂಬ ನಂಬಿಕೆ ಇದೆ.

ಮಕರ ರಾಶಿ

ಈ ರಾಶಿಯ ಅಧಿಪತಿಯು ಶನಿ ಗ್ರಹವಾಗಿದೆ. ಶನಿ ದೇವನಿಗೆ ನ್ಯಾಯದ ದೇವತೆ ಎಂದೇ ಹೇಳಲಾಗುತ್ತದೆ. ಹೀಗಾಗಿ ಈ ರಾಶಿಯವರಿಗೆ ನೀಲಿ ಬಣ್ಣದ ರಾಖಿ ಕಟ್ಟುವುದು ಶುಭ ಎಂದು ಹೇಳಲಾಗುತ್ತದೆ. ಇದರಿಂದ ಸಹೋದರ-ಸಹೋದರಿಯರ ಪ್ರೇಮ-ಬಾಂಧವ್ಯ ಶಾಶ್ವತವಾಗಿ ಉತ್ತಮವಾಗಿರುತ್ತದೆ.

Advertisement

ಕುಂಭ ರಾಶಿ

ಈ ರಾಶಿಯ ಅಧಿಪತಿಯೂ ಶನಿ ಗ್ರಹವೇ ಆಗಿದೆ. ಹೀಗಾಗಿ ಶನಿದೇವನಿಗೆ ಪ್ರಿಯವಾದ ಇನ್ನೊಂದು ಬಣ್ಣವಾಗಿರುವ ಹಚ್ಚ ಹಸಿರು ಬಣ್ಣದ ರುದ್ರಾಕ್ಷಿ ಮಾಲೆಯುಳ್ಳ ರಾಖಿಯನ್ನು ಕಟ್ಟಿದರೆ ಬಹಳ ಶ್ರೇಷ್ಠ ಎಂದು ನಂಬಲಾಗಿದೆ. ಹೀಗಾಗಿ ಸಹೋದರಿ ರಾಖಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳುವುದು ಉತ್ತಮ.

Advertisement

ಮೀನ ರಾಶಿ

ಈ ರಾಶಿಯ ಅಧಿಪತಿಯು ಗುರು ಗ್ರಹವಾಗಿದ್ದು, ಹಸಿರು ಬಣ್ಣದ ರಾಖಿ ಕಟ್ಟುವುದರಿಂದ ಈ ರಾಶಿಯ ಸಹೋದರನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಜೊತೆಗೆ ಹಳದಿ ಬಣ್ಣದ ರಾಖಿ ಸಹ ಶುಭ ಎಂದು ಹೇಳಲಾಗಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ