Featured
ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಿ : ರಾಮನಗರ ಜಿಲ್ಲಾಡಳಿತ್ಕಕೆ ಡಿಸಿಎಂ ಅಶ್ವತ್ಥ ನಾರಾಯಣ್ ಸೂಚನೆ

ರೈಸಿಂಗ್ ಕನ್ನಡ:
ರಾಮನಗರ :
ಕೋವಿಡ್-19 ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರೆಸುವಂತೆ ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿ, ಈಗಿರುವ ಕೋವಿಡ್-19 ಆಸ್ಪತ್ರೆಯನ್ನು 300 ಹಾಸಿಗೆಗಳ ಸುಸಜ್ಜಿತ ವಿಸ್ತರಿತ ಆಸ್ಪತ್ರೆಯಾಗಿ ಮಾರ್ಪಡಿಸಲು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ವಿಸ್ತರಿತ ಆಸ್ಪತ್ರೆಯಲ್ಲಿ ತುರ್ತು ನಿರ್ವಹಣಾ ಕೇಂದ್ರ, ಅಪಘಾತ ಚಿಕಿತ್ಸೆ ವಿಭಾಗ, ಟ್ರಾಮ, ಕ್ಯಾನ್ಸರ್ ಸೇರಿದಂತೆ ಪ್ರಮುಖ ರೋಗಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸುವಂತೆ ಸಲಹೆ ನೀಡಿದರು.
ಹುದ್ದೆ ಭರ್ತಿ:
ಪ್ರಸಕ್ತ ರಾಮನಗರ ಜಿಲ್ಲೆಯಲ್ಲಿ ಅವಶ್ಯಕತೆ ಇರುವ 18 ವೈದ್ಯರು, 30 ಶುಶ್ರೂಕಿಯರು, 26 ಡಿ ಗ್ರೂಪ್ ಮತ್ತು 14 ಪ್ರಯೋಗಾಲ ಪರೀಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಉಪಮುಖ್ಯಮಂತ್ರಿಗಳು ಅನುಮೋದನೆ ನೀಡಿದರು.
ಕ್ಷಿಪ್ರ ಪರೀಕ್ಷೆ: ಜಿಲ್ಲೆಯಲ್ಲಿ ಕೋವಿಡ್-19 ಅನ್ನು ನಿಯಂತ್ರಿಸಲು ಅನುವಾಗುವಂತೆ ಸ್ಯಾಂಪಲ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ದಿನವೂ 200ಕ್ಕೂ ಹೆಚ್ಚು ಟ್ರೂನೆಟ್ ಮತ್ತು ಆ್ಯಂಟಿಜೆನ್ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಿಳಿಸಿದರು.
ಆರ್ಟಿ-ಪಿಸಿಆರ್ ಪರೀಕ್ಷೆ: ಉದ್ಘಾಟಿಸಬೇಕಾಗಿರುವ ಹೊಸ ಜಿಲ್ಲಾ ಆಸ್ಪತ್ರೆಯ ಕಟ್ಟಡದಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆ ಕೇಂದ್ರವನ್ನು ಅಗತ್ಯ ಸಿಬ್ಬಂದಿಯೊAದಿಗೆ ಜುಲೈ ತಿಂಗಳ ಅಂತ್ಯಕ್ಕೆ ಆರಂಭಿಸಬೇಕು. ಇದಕ್ಕೆ ಬೇಕಾಗಿರುವ ನೆರವನ್ನು ಕೊಪ್ಪಳದಲ್ಲಿರುವ ಕೇಂದ್ರದೊಂದಿಗೆ ಪಡೆದುಕೊಳ್ಳುವಂತೆ ತಿಳಿಸಿದರು. ಹಾಗೆಯೇ, ಆಸ್ಪತ್ರೆಯಲ್ಲಿರುವ ಈ ಕೇಂದ್ರದ ನಿರ್ವಹಣೆಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯವರು ನೀಡಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮತ್ತು ಇನ್ನಿತರ ಅಧಿಕಾರಿಗಳು ಹಾಜರಿದ್ದರು.
You may like

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ

ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!

ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್

ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?

ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!






















