ದೇಶ-ವಿದೇಶ
ಪೇಟಿಎಂ ಪೇಮೆಂಟ್ಸ್ ಗೆ ಆರ್ ಬಿ ಐ ಶಾಕ್..!
ಗ್ರಾಹಕರಿಗೂ ತಟ್ಟುತ್ತಾ ನಿಷೇಧದ ಬಿಸಿ..?

ಬೆಂಗಳೂರು : ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಆರ್ಬಿಐ ಹಲವು ನಿರ್ಬಂಧಗಳನ್ನು ವಿಧಿಸಿದೆ. ಹೊಸ ಗ್ರಾಹಕರನ್ನು ಸ್ವೀಕರಿಸಬಾರದು; ಹೊಸ ಡೆಪಾಸಿಟ್ ಪಡೆಯಬಾರದು; ಫೆಬ್ರುವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ಜೋಡಿತವಾದ ವ್ಯಾಲಟ್, ಫಾಸ್ಟ್ಯಾಗ್ ಇತ್ಯಾದಿ ಪ್ರೀಪೇಡ್ ಯಂತ್ರಗಳಿಗೆ ಟಾಪಪ್ ಹಾಕಿಸುವಂತಿಲ್ಲ ಎಂದು ಆರ್ಬಿಐ ನಿರ್ಬಂಧ ಹಾಕಿದೆ.
ಪೇಟಿಎಂ ಆ್ಯಪ್ಗೂ ಇದಕ್ಕೂ ಸಂಬಂಧ ಇಲ್ಲ
ಆದರೆ, ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ಯಾಕೆ ನಿರ್ಬಂಧ?
ಹೊರಗಿನ ಆಡಿಟರ್ಗಳು ಪೇಟಿಎಂ ಬ್ಯಾಂಕ್ನಲ್ಲಿ ಆಡಿಟಿಂಗ್ ಮಾಡಿವೆ. ಬ್ಯಾಂಕಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ವಿಚಾರ ಆಡಿಟಿಂಗ್ನಿಂದ ಗೊತ್ತಾಗಿದೆ. ಎರಡು ವರ್ಷದ ಹಿಂದೆಯೇ ಇದು ನಡೆದಿತ್ತು. 2022ರ ಮಾರ್ಚ್ ತಿಂಗಳಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಸ ಗ್ರಾಹಕರನ್ನು ಹೊಂದಬಾರದು ಎಂದು ಆರ್ಬಿಐ ನಿರ್ಬಂಧ ಹಾಕಿತ್ತು. ಇದೀಗ 2024ರ ಫೆಬ್ರುವರಿ 29ರ ನಂತರ ಪ್ರೀಪೇಡ್ ಇನ್ಸ್ಟ್ರುಮೆಂಟ್ಸ್, ವ್ಯಾಲಟ್ಸ್, ಫಾಸ್ಟ್ಯಾಗ್, ಎನ್ಸಿಎಂಸಿ ಕಾರ್ಡ್ ಇತ್ಯಾದಿಗೆ ಹಣ ರವಾನಿಸುವಂತಿಲ್ಲ, ಟಾಪಪ್ ಹಾಕುವಂತಿಲ್ಲ ಎಂದು ಆರ್ಬಿಐ ಆದೇಶಿಸಿದೆ.
ಅದರೆ, ಈ ಮೊದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಅಕೌಂಟ್ ಹೊಂದಿರುವವರ ಖಾತೆಗೆ ಕ್ಯಾಷ್ಬ್ಯಾಕ್, ಬಡ್ಡಿ, ರೀಫಂಡ್ ಇತ್ಯಾದಿಯನ್ನು ಹಾಕಲು ಅಡ್ಡಿ ಇಲ್ಲ. ಪೇಮೆಂಟ್ಸ್ ಬ್ಯಾಂಕ್ನಲ್ಲಿ ಖಾತೆ ಹೊಂದಿರುವವರು ತಮ್ಮ ಹಣವನ್ನು ಸಂಪೂರ್ಣ ವಿತ್ಡ್ರಾ ಮಾಡಿಕೊಳ್ಳಲು ಯಾವುದೇ ಅಡ್ಡಿ ಆಗಬಾರದು ಎಂದೂ ಆರ್ಬಿಐ ಸೂಚಿಸಿದೆ. ಹಾಗೆಯೇ, ಪೇಟಿಎಂ ಮಾಲೀಕ ಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ ಮತ್ತು ಪೇಟಿಎಂ ಪೇಮೆಂಟ್ಸ್ ಸರ್ವಿಸಸ್ನ ನೋಡಲ್ ಅಕೌಂಟ್ಗಳನ್ನು ಫೆಬ್ರುವರಿ 29ರೊಳಗೆ ನಿಲ್ಲಿಸುವಂತೆಯೂ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ಗೆ ಆರ್ಬಿಐ ನಿರ್ಬಂಧ ಹೇರಿದ ಬೆನ್ನಲ್ಲೇ ಪೇಟಿಎಂ ಷೇರುಗಳ ಮೌಲ್ಯ ಪಾತಾಳಕ್ಕೆ ಕುಸಿದಿದೆ. ಇದರಿಂದಾಗಿ ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ. ಒಟ್ನಲ್ಲಿ ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ರ ಕನಸಿನ ಪೇಟಿಎಂಗೆ ಆರ್ ಬಿ ಐ ಕೊಕ್ಕೆ ಹಾಕಿದೆ..ಮುಂದೇನಾಗುತ್ತೋ ಕಾದು ನೋಡಬೇಕು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?