Connect with us

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಪರಿಶೀಲನೆ:

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಶಾಲಿನಿ ರಜನೀಶ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋರಮಂಗಲ ರಾಜಕಾಲುವೆ(ಕೆ-100) ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗಿನ 9.2 ಕಿ.ಮೀ ಉದ್ದದ ರಾಜಕಾಲುವೆಯಲ್ಲಿ ಜಲಮಾರ್ಗ ಯೋಜನೆ ಕಾಮಗಾರಿ ಪ್ರಗತಿ ಕುರಿತಂತೆ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಂಬಾರಗುಂಡಿ ಬಳಿ ರಾಜಕಾಲುವೆಯಲ್ಲಿ ಹರಿಯುವ ನೀರನ್ನು ಶುದ್ಧೀಕರಿಸಲು ನಿರ್ಮಸುತ್ತಿರುವ 05 ಎಂ.ಎಲ್.ಡಿ ಎಸ್.ಟಿ.ಪಿಯ(ತ್ಯಾಜ್ಯ ನೀರು ಸಂಸ್ಕರಣಾ ಘಟಕ) ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಕೂಡಲೆ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಿ ಘಟಕವನ್ನು ಕಾರ್ಯಾರಂಭಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬನ್ನೇರಘಟ್ಟ ಮುಖ್ಯ ರಸ್ತೆ ವಿಲ್ಸನ್ ಗಾರ್ಡನ್ ಹತ್ತಿರ ರಾಜಕಾಲುವೆ ಅಭಿವೃದ್ಧಿಕಾರ್ಯವನ್ನು ಪರಿಸೀಲಿಸಿದ ಬಳಿಕ ಮಾರಪ್ಟ ಗಾರ್ಡನ್ ಬಳಿ ರಾಜಕಾಲುವೆ ಪಕ್ಕದಲ್ಲಿ ಒತ್ತುವರಿಯಾಗಿರುವ ಪ್ರದೇಶವನ್ನು ಪರಿಶೀಲಿಸಿ ಸರ್ವೇ ಮಾಡಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ರವರಿಗೆ ಸೂಚನೆ ನೀಡಿದರು.

Advertisement

ಇಂಟರ್ ಮೀಡಿಯೆಟ್ ಸೀವೆಜ್ ಪಂಪಿಂಗ್ ಸ್ಟೇಷನ್ ನಿರ್ಮಾಣ:

ಶಾಂತಿನಗರ ಬಸ್ ನಿಲ್ದಾಣದ ಬಳಿ ನಾಗರಿಕ ಜಲಮಾರ್ಗ ಪರಿಶೀಲನೆಯ ವೇಳೆ ರಾಜಕಾಲುವೆಗೆ ತ್ಯಾಜ್ಯನೀರು ಬರುತ್ತಿರುವುದನ್ನು ಗಮನಿಸಿ, ರಾಜಕಾಲುವೆಗೆ ತ್ಯಾಜ್ಯ ನೀರು ಬರುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಅದಕ್ಕಾಗಿ ಜಲಮಂಡಳಿಯು ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಈ ವೇಳೆ ಜಲಮಂಡಳಿಯ ಮುಖ್ಯ ಅಭಿಯಂತರರು ಪ್ರತಿಕ್ರಿಯಿಸಿ, ರಾಜಕಾಲುವೆಗೆ ತ್ಯಾಜ್ಯ ನೀರು ಬರುವುದನ್ನು ನಿಲ್ಲಿಸುವ ಸಲುವಾಗಿ 15 ಎಂ.ಎಲ್.ಡಿ ಸಾಮರ್ಥ್ಯದ ಇಂಟರ್ ಮೀಡಿಯೆಟ್ ಸೀವೆಜ್ ಪಂಪಿಂಗ್ ಸ್ಟೇಷನ್(ISPS) ನಿರ್ಮಿಸಬೇಕಿದೆ. ಅದಕ್ಕಾಗಿ ಸ್ಥಳದ ಅವಶ್ಯಕತೆಯಿದ್ದು, ಕೆ.ಎಸ್.ಆರ್.ಟಿ.ಸಿಯ ಸ್ಥಳವನ್ನು ನೀಡಿದ್ದು, ಹಸ್ತಾಂತರ ಪ್ರಕ್ರಿಯೆ ಬಾಕಿಯಿದೆ ಎಂದು ತಿಳಿಸಿದಾಗ, ಕೂಡಲೆ ಸ್ಥಳ ಪರಿಶೀಲಿಸಿ ISPS ನಿರ್ಮಿಸಲು ಕೂಡಲೆ ಜಾಗ ಹಸ್ತಾಂತರಿಸಿಕೊಂಡು ಕೂಡಲೆ ಕಾಮಗಾರಿಯನ್ನು ಕೈಗೆತ್ತಿಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ-100 ಯೋಜನೆಯ ಪ್ರಗತಿಯ ವಿವರ:

ಕೆ-100 ಯೋಜನೆಯು 9.2 ಕಿ.ಮೀ ಉದ್ದವಿದ್ದು, ಈಗಾಗಲೇ ಹೂಳೆತ್ತಿ ಕಲುಷಿತಗೊಂಡಿರುವ ರಾಜಕಾಲುವೆಯ ತಳಭಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಇಂಗುವಂತೆ ವಿನ್ಯಾಸಗೊಳಿಸಿ ಅಭಿವೃದ್ಧಿಗೊಳಿಸಲಾಗಿದೆ.

Advertisement

ರಾಜಕಾಲುವೆ ಮಾರ್ಗದ ಎರಡೂ ಬದಿಯ ತಡೆಗೋಡೆ, ತಳಮಟ್ಟದ ಸೇತುವೆಗಳನ್ನು ವಾಸ್ತುಶಿಲ್ಪದ ಮಾದರಿಯಲ್ಲಿ ವಿನ್ಯಾಸಗೊಳಿಸುವ ಕಾರ್ಯ ಬಹುತೇಖ ಪೂರ್ಣಗೊಂಡಿದೆ. ಹಸಿರೀಕರಣ, ರಾತ್ರಿ ಸಮಯದಲ್ಲಿ ಉದ್ಯಾನವನದ ರೀತಿಯಲ್ಲಿ ಅಲಂಕಾರಿಕ ವಿದ್ಯುಧೀಕರಣ ಅಳವಡಿಕೆ ಕಾರ್ಯ, ಗ್ರಾನೈಟ್ ಅಳವಡಿಕೆ, ತೋಟಗಾರಿಕೆ, ಪಾದಚಾರಿ ಮಾರ್ಗ, ಗ್ರಿಲ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ.

ರಾಜಕಾಲುವೆ ಮೇಲೆ ಎರಡೂ ಬದಿ ಸಂಚರಿಸಲು ಬ್ರಿಡ್ಜ್ ಗಳ ನಿರ್ಮಾಣ ಬಹುತೇಖ ಪೂರ್ಣಗೊಳಿಸಲಾಗಿದೆ. ವಿದ್ಯುತ್ ಅಳವಡಿಕೆಗಾಗಿ ಅತ್ಯಾಧುನಿಕ ಟ್ರಾನ್ಸ್ ಫಾರ್ಮ್ ಗಳನ್ನು ಅಳವಡಿಸಲಾಗಿದೆ. ಜೊತೆಗೆ ರಾಜಕಾಲುವೆಯ ಎರಡೂ ಬದಿಯ ಸರ್ವೀಸ್ ರಸ್ತೆ ಅಭಿವೃದ್ಧಿ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಸವೀರ್ಸ್ ರಸ್ತೆಯಲ್ಲಿ ರಾಜಕಾಲುವೆಗೆ ಮಳೆ ನೀರು ಹರಿದು ಹೋಗದಂತೆ ಪೈಪ್ ಲೈನ್, ಕೇಬಲ್ ಅಳವಡಿಕೆಗೆ ಚೇಂಬರ್ ಗಳ ಕಾಮಗಾರಿ ಕೂಡಾ ಪೂರ್ಣಗೊಳಿಸಲಾಗಿದೆ.

ಈ ವೇಳೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಶ್ರೀ ದಯಾನಂದ್, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಹ್ಲಾದ್, ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ