ಬೆಂಗಳೂರು, ಜು2 : ಜನರಿಗೆ ಅರ್ಥವಾಗದ, ಜನರಿಗೆ ಗೊತ್ತಿಲ್ಲದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ಬಸವಣ್ಣ ಮತ್ತು ವಚನಕಾರರು ಜನರಿಗೆ ಅರ್ಥ ಆಗುವ, ಜನರದ್ದೇ ಆದ ಕನ್ನಡ ಭಾಷೆಯಲ್ಲಿ ತಿಳಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಫ.ಗು.ಹಳಕಟ್ಟಿಯವರು 200 ವಚನಕಾರರ ವಚನಗಳನ್ನು ಸಂಗ್ರಹಿಸಿ ತಮ್ಮ ಮತ್ತು ಮುಂದಿನ ತಲೆಮಾರಿಗೆ ದಾಟಿಸುವ ಮಹಾನ್ ಮೌಲ್ಯಯುತವಾದ ಕೆಲಸ ಮಾಡಿದರು. ಆದ್ದರಿಂದಲೇ ಫ.ಗು.ಹಳಕಟ್ಟಿಯವರ ಜನ್ಮದಿನವನ್ನು “ವಚನ ಸಾಹಿತ್ಯ ಸಂರಕ್ಷಣಾ ದಿನ” ವನ್ನಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.
ಹೀಗಾಗಿ ಫ.ಗು.ಹಳಕಟ್ಟಿಯವರ ಮಾರ್ಗ ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಆಶಿಸಿದರು. ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ವಿಭೂತಿಪುರ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು. ನಾಡೋಜ ಡಾ.ಗೋ.ರು.ಚನ್ನಬಸಪ್ಪ ಅವರು ಫ.ಗು.ಹಳಕಟ್ಟಿಯವರ ಕುರಿತು ಉಪನ್ಯಾಸ ನೀಡಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?