ಶಿವಣ್ಣ ನಿವಾಸದಲ್ಲಿ ಚಿತ್ರರಂಗದ ಮಹತ್ವದ ಸಭೆ – ಸಚಿವ ಸಿ.ಟಿ ರವಿ ಮೂಲಕ ಸರ್ಕಾರಕ್ಕೆ ಪ್ಯಾಕೇಜ್ ನೀಡಲು ಮನವಿ
ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಯಾರನ್ನೂ ಬಿಟ್ಟಿಲ್ಲ. ಯಾವ ಕ್ಷೇತ್ರವನ್ನೂ ಬಿಡುತ್ತಿಲ್ಲ. ಅತ್ತ ಕೆಲಸವೂ ಇಲ್ಲ, ಇತ್ತ ಹಣವೂ ಇಲ್ಲ. ಬಣ್ಣದ ಲೋಕವೂ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯ ಕಾರ್ಮಿಕರ ಸಂಕಷ್ಟ ಹೆಚ್ಚುತ್ತಲೇ ಇದೆ.
ಇದೇ ಕಾರಣಕ್ಕಾಗಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಿವಾಸದಲ್ಲಿ ಸಚಿವ ಸಿ.ಟಿ ರವಿ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ಕಿರುತೆರೆ ಮತ್ತು ಚಲನಚಿತ್ರ ಉದ್ಯಮವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್ ನೀಡಲು ಮನವಿ ಮಾಡಲಾಯ್ತು.
ಹಾಗೆ ಚಿತ್ರರಂಗದ ಪುನಶ್ಚೇತನದ ನೆರವಿಗೂ ಮನವಿ ಮಾಡಲಾಯ್ತು. ಇದೇ ಸಂದರ್ಭದಲ್ಲಿ ಚಿತ್ರ ಮಂದಿರ ತೆರೆಯಲು ಹಾಗು ದರ ನಿಗದಿ, ತೆರಿಗೆ ವಿನಾಯತಿ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಟ ಉಪೇಂದ್ರ, ಯಶ್, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಯಶ್, ಪುನೀತ್ ರಾಜ್ಕುಮಾರ್, ಗಣೇಶ್, ದುನಿಯಾವಿಜಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.