ಆರೋಗ್ಯ
SaveBandipura | ಏನಿದು ಸೇವ್ ಬಂಡೀಪುರ ಟ್ರೆಂಡಿಂಗ್..?

ಬಂಡೀಪುರ ಉಳಿಸಿ ಅಭಿಯಾನಕ್ಕೆ ನಿಮ್ಮ ಅಭಿಪ್ರಾಯ ಕಾಮೆಂಟ್ ಮಾಡಿ
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸೇವ್ ಬಂಡೀಪುರ ಅನ್ನೋ ಹ್ಯಾಷ್ ಟ್ಯಾಗ್ ಜೋರಾಗಿನೇ ಸದ್ದು ಮಾಡ್ತಿದೆ. ಇಷ್ಟಕ್ಕೂ ಏನಿದು ಸೇವ್ ಬಂಡೀಪುರ.? ಟ್ರೆಂಡಿಂಗ್ ಯಾಕೆ ಅಂತ ನೋಡೋದಾದ್ರೆ..
ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು ಎರಡು ಕಣ್ಣು ಇದ್ದಹಾಗೆ. ಅಭಿವೃದ್ಧಿ ಹೆಸರಿನಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು ಮತ್ತು ಆ ಯೋಜನೆಗಳನ್ನು ತಿರಸ್ಕರಿಸಬೇಕು. ಹಾಗೂ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಮುಂದುವರೆಸಬೇಕು,” ಎನ್ನುವ ಹಲವು ಟ್ವೀಟ್ ಗಳು ಈಗ ವೈರಲ್ ಆಗ್ತಿವೆ.
ಕೇರಳದ ನಿಲಂಬೂರು ಮತ್ತು ಕರ್ನಾಟಕದ ನಂಜನಗೂಡಿಗೆ ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ನಿಲಂಬೂರು-ನಂಜನಗೂಡು ರೈಲ್ವೆ ಯೋಜನೆಗೆ ಅಂತಿಮ ವರದಿ ಸಿದ್ಧಪಡಿಸಲು ವೈಮಾನಿಕ ಸಮೀಕ್ಷೆ ಪೂರ್ಣಗೊಂಡ ಬೆನ್ನಲ್ಲೇ ‘ಸೇವ್ ಬಂಡೀಪುರ’ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಇತ್ತೀಚೆಗೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಕೇರಳ ಸರ್ಕಾರದ ಮನವಿಯಂತೆ ಕರ್ನಾಟಕವನ್ನು ಕೇರಳದೊಂದಿಗೆ ಸಂಪರ್ಕಿಸುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧದ ಸಂಭಾವ್ಯ ಸಡಿಲಿಕೆಯ ಸುಳಿವು ನೀಡಿದರು. ಇನ್ನು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಅಭಿಯಾನಗಳನ್ನು ಪ್ರಾರಂಭಿಸಿದ ನಂತರ ವನ್ಯಜೀವಿ ಉತ್ಸಾಹಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.
ರೈಲ್ವೇ ಮಾರ್ಗದ ವೈಮಾನಿಕ ಸಮೀಕ್ಷೆಯು ಪರಿಸರವಾದಿಗಳು ಮತ್ತು ವನ್ಯಜೀವಿ ಉತ್ಸಾಹಿಗಳಲ್ಲಿ ಕಳವಳವನ್ನು ಉಂಟುಮಾಡಿದೆ. ಈ ಬೆಳವಣಿಗೆಗಳಿಗೆ ಪ್ರತಿಯಾಗಿ ‘ಸೇವ್ ಬಂಡೀಪುರ’ ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ಆನ್ ಲೈನ್ ಅಭಿಯಾನವೊಂದು ಭಾರೀ ಸದ್ದು ಮಾಡುತ್ತಿದೆ. ರಾತ್ರಿ ಸಂಚಾರ ನಿಷೇಧವನ್ನು ಮುಂದುವರೆಸುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಮತ್ತು ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಸಂಚರಿಸಲು ಯೋಜಿಸಿರುವ ರೈಲ್ವೆ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ, ಬಹುತೇಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?